<p><strong>ಕಡರನಾಯ್ಕನಹಳ್ಳಿ</strong>: ‘ಬೇಸಿಗೆ ಶಿಬಿರಗಳು ಮುಂದಿನ ಶೈಕ್ಷಣಿಕ ವರ್ಷದ ಬುನಾದಿ. ಶಿಬಿರವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಡಿಗಲ್ಲಾಗಲಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಗೌರವ ನೀಡುವುದರಿಂದ ಮುಂದಿನ ಕಲಿಕೆಗೆ ಪ್ರೇರಣೆ ನೀಡಿದಂತಾಗುತ್ತದೆ’ ಎಂದು ರಾಜ್ಯ ಸಂಪನ್ಮೂಲ ವ್ಯಕ್ತಿ, ವಿಜ್ಞಾನ ಶಿಕ್ಷಕ ಎಂ.ಎನ್. ಶ್ರೀಧರಮಯ್ಯ ತಿಳಿಸಿದರು.</p>.<p>ಭಾನುವಳ್ಳಿ ಗ್ರಾಮದ ವಿನಾಯಕ ವಿದ್ಯಾದಾನ ಸಮಿತಿ ವತಿಯಿಂದ ಏರ್ಪಡಿಸಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಮತ್ತು ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ಪ್ರದೇಶದಲ್ಲಿ ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಆ ಕಾರಣದಿಂದ ಗ್ರಾಮೀಣ ಪ್ರತಿಭೆಗಳು ಹೊರಬರುತ್ತಿವೆ’ ಎಂದು ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯ ಜೆ.ಆರ್ ಮಂಜುನಾಥ್ ಹೇಳಿದರು. </p>.<p>ವಿದ್ಯಾದಾನ ಸಮಿತಿ ಪ್ರೌಢಶಾಲೆ, ಕೆಪಿಎಸ್ ಭಾನುವಳ್ಳಿ, ಬೆಳ್ಳೂಡಿ, ಕಡರನಾಯ್ಕನಹಳ್ಳಿ, ಬಿಳಸನೂರು, ಹೊಸಳ್ಳಿ, ಬೂದಿಹಾಳ್ ಗ್ರಾಮದ ಪ್ರೌಢಶಾಲೆಗಳಲ್ಲಿ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡರನಾಯ್ಕನಹಳ್ಳಿ</strong>: ‘ಬೇಸಿಗೆ ಶಿಬಿರಗಳು ಮುಂದಿನ ಶೈಕ್ಷಣಿಕ ವರ್ಷದ ಬುನಾದಿ. ಶಿಬಿರವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಡಿಗಲ್ಲಾಗಲಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಗೌರವ ನೀಡುವುದರಿಂದ ಮುಂದಿನ ಕಲಿಕೆಗೆ ಪ್ರೇರಣೆ ನೀಡಿದಂತಾಗುತ್ತದೆ’ ಎಂದು ರಾಜ್ಯ ಸಂಪನ್ಮೂಲ ವ್ಯಕ್ತಿ, ವಿಜ್ಞಾನ ಶಿಕ್ಷಕ ಎಂ.ಎನ್. ಶ್ರೀಧರಮಯ್ಯ ತಿಳಿಸಿದರು.</p>.<p>ಭಾನುವಳ್ಳಿ ಗ್ರಾಮದ ವಿನಾಯಕ ವಿದ್ಯಾದಾನ ಸಮಿತಿ ವತಿಯಿಂದ ಏರ್ಪಡಿಸಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಮತ್ತು ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ಪ್ರದೇಶದಲ್ಲಿ ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ. ಆ ಕಾರಣದಿಂದ ಗ್ರಾಮೀಣ ಪ್ರತಿಭೆಗಳು ಹೊರಬರುತ್ತಿವೆ’ ಎಂದು ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯ ಜೆ.ಆರ್ ಮಂಜುನಾಥ್ ಹೇಳಿದರು. </p>.<p>ವಿದ್ಯಾದಾನ ಸಮಿತಿ ಪ್ರೌಢಶಾಲೆ, ಕೆಪಿಎಸ್ ಭಾನುವಳ್ಳಿ, ಬೆಳ್ಳೂಡಿ, ಕಡರನಾಯ್ಕನಹಳ್ಳಿ, ಬಿಳಸನೂರು, ಹೊಸಳ್ಳಿ, ಬೂದಿಹಾಳ್ ಗ್ರಾಮದ ಪ್ರೌಢಶಾಲೆಗಳಲ್ಲಿ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>