<p><strong>ಹೊನ್ನಾಳಿ:</strong> ಭಾರತದ ಸಂಸ್ಕೃತಿಯನ್ನು ವಿಶ್ವಕ್ಕೆ ಸಾರಿದ ಮಹಾನ್ ಸಂತ ಸ್ವಾಮಿ ವಿವೇಕಾನಂದರು ಎಂದು ದಾವಣಗೆರೆ ಸೈನ್ಸ್ ಫೌಂಡೇಷನ್ನ ಸಂಚಾಲಕ ಎಂ. ಗುರುಸಿದ್ದಸ್ವಾಮಿ ಹೇಳಿದರು.</p>.<p>ಶುಕ್ರವಾರ ಪಟ್ಟಣದ ಎಸ್ಜೆವಿಪಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಹಾಗೂ ರಾಷ್ಟ್ರೀಯ ಯುವದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಬಾಲ್ಯದಲ್ಲಿಯೇ ತೀಕ್ಷ್ಣ ಬುದ್ಧಿ ಹೊಂದಿದ್ದ ವಿವೇಕಾನಂದರು ಅಷ್ಟೇ ಧೈರ್ಯವಂತರೂ ಆಗಿದ್ದರು. ದೇವರ ಹುಡುಕಾಟದಲ್ಲಿದ್ದ ಅವರು ಗುರು ರಾಮಕೃಷ್ಣ ಪರಮಹಂಸರ ಜೊತೆ ತಮ್ಮ ಸಂದೇಹಗಳನ್ನು ಹಂಚಿಕೊಂಡಿದ್ದರು. ಅವರಿಂದ ಉತ್ತರ ಕಂಡುಕೊಂಡು ಮಹಾನ್ ಸಂತರಾದರು’ ಎಂದರು.</p>.<p>ಮೇರಾ ಯುವ ಭಾರತ್ ಸಂಸ್ಥೆಯ ಜಿಲ್ಲಾ ಸಂಯೋಜಕ ಯೋಗೀಶ್ ಹೊಸಕೆರೆಮಠ್ ಮಾತನಾಡಿ, ವಿಮರ್ಶಾತ್ಮಕ ಆಲೋಚನೆ, ಜಾತ್ಯತೀತ ಮನೋಭಾವ ವಿವೇಕಾನಂದರನ್ನು ಚಿಂತಕರನ್ನಾಗಿಸಿತು ಎಂದು ಹೇಳಿದರು.</p>.<p>ಭಾರತಕ್ಕೆ ವಿಶ್ವಮಾನ್ಯತೆ ತಂದುಕೊಟ್ಟ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ವಿದ್ಯಾಪೀಠದ ನಿರ್ದೇಶಕ ಎಂ.ಪಿ.ಎಂ. ಚನ್ನಬಸಯ್ಯ ತಿಳಿಸಿದರು.</p>.<p>ದಾವಣಗೆರೆ ಜಿಲ್ಲಾ ಬಾಲಭವನದ ಸಂಯೋಜಕಿ ಎಸ್.ಬಿ. ಶಿಲ್ಪಾ, ಕಾಲೇಜಿನ ಉಪನ್ಯಾಸಕ ರವೀಂದ್ರನಾಥ್ ಮಾತನಾಡಿದರು. ಪ್ರಾಂಶುಪಾಲರಾದ ಮಮತಾ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ಭಾರತದ ಸಂಸ್ಕೃತಿಯನ್ನು ವಿಶ್ವಕ್ಕೆ ಸಾರಿದ ಮಹಾನ್ ಸಂತ ಸ್ವಾಮಿ ವಿವೇಕಾನಂದರು ಎಂದು ದಾವಣಗೆರೆ ಸೈನ್ಸ್ ಫೌಂಡೇಷನ್ನ ಸಂಚಾಲಕ ಎಂ. ಗುರುಸಿದ್ದಸ್ವಾಮಿ ಹೇಳಿದರು.</p>.<p>ಶುಕ್ರವಾರ ಪಟ್ಟಣದ ಎಸ್ಜೆವಿಪಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಹಾಗೂ ರಾಷ್ಟ್ರೀಯ ಯುವದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಬಾಲ್ಯದಲ್ಲಿಯೇ ತೀಕ್ಷ್ಣ ಬುದ್ಧಿ ಹೊಂದಿದ್ದ ವಿವೇಕಾನಂದರು ಅಷ್ಟೇ ಧೈರ್ಯವಂತರೂ ಆಗಿದ್ದರು. ದೇವರ ಹುಡುಕಾಟದಲ್ಲಿದ್ದ ಅವರು ಗುರು ರಾಮಕೃಷ್ಣ ಪರಮಹಂಸರ ಜೊತೆ ತಮ್ಮ ಸಂದೇಹಗಳನ್ನು ಹಂಚಿಕೊಂಡಿದ್ದರು. ಅವರಿಂದ ಉತ್ತರ ಕಂಡುಕೊಂಡು ಮಹಾನ್ ಸಂತರಾದರು’ ಎಂದರು.</p>.<p>ಮೇರಾ ಯುವ ಭಾರತ್ ಸಂಸ್ಥೆಯ ಜಿಲ್ಲಾ ಸಂಯೋಜಕ ಯೋಗೀಶ್ ಹೊಸಕೆರೆಮಠ್ ಮಾತನಾಡಿ, ವಿಮರ್ಶಾತ್ಮಕ ಆಲೋಚನೆ, ಜಾತ್ಯತೀತ ಮನೋಭಾವ ವಿವೇಕಾನಂದರನ್ನು ಚಿಂತಕರನ್ನಾಗಿಸಿತು ಎಂದು ಹೇಳಿದರು.</p>.<p>ಭಾರತಕ್ಕೆ ವಿಶ್ವಮಾನ್ಯತೆ ತಂದುಕೊಟ್ಟ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ವಿದ್ಯಾಪೀಠದ ನಿರ್ದೇಶಕ ಎಂ.ಪಿ.ಎಂ. ಚನ್ನಬಸಯ್ಯ ತಿಳಿಸಿದರು.</p>.<p>ದಾವಣಗೆರೆ ಜಿಲ್ಲಾ ಬಾಲಭವನದ ಸಂಯೋಜಕಿ ಎಸ್.ಬಿ. ಶಿಲ್ಪಾ, ಕಾಲೇಜಿನ ಉಪನ್ಯಾಸಕ ರವೀಂದ್ರನಾಥ್ ಮಾತನಾಡಿದರು. ಪ್ರಾಂಶುಪಾಲರಾದ ಮಮತಾ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>