ಈ ಸಂಬಂಧ ಹೇಳಿಕೆ ನೀಡಿರುವ ಅವರು, ‘ಪ್ರಕರಣದಲ್ಲಿ ನೊಂದ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆದರೆ, ನ್ಯಾಯ ಕೊಡಿಸುವ ಹಾದಿಯಲ್ಲಿ ಯಾರಿಗೂ ಅನ್ಯಾಯವಾಗಬಾರದು. ಪ್ರಕರಣದಲ್ಲಿ ಯಾರನ್ನು ಬೇಕಾದರೂ ಸಿಬಿಐ ವಿಚಾರಣೆ ನಡೆಸಲಿ. ಆದರೆ, ಅದರಲ್ಲಿ ರಾಜಕೀಯ ದುರುದ್ದೇಶ ಇರಬಾರದು. ಪಂಚಮಸಾಲಿ ಸಮುದಾಯ ಸದಾ ಸತ್ಯ ಮತ್ತು ನ್ಯಾಯದ ಪರವಾಗಿದೆ’ ಎಂದು ಸ್ವಾಮೀಜಿ ತಿಳಿಸಿದ್ದಾರೆ.