ದಾವಣಗೆರೆ: ನಗರದ ಬಿ.ಟಿ. ಲೇಔಟ್ನಲ್ಲಿ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಯನ್ನು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಬುಧವಾರ ವೀಕ್ಷಿಸಿದರು.
ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗದಿಂದ ಭವನ ನಿರ್ಮಾಣ ಕಾರ್ಯ ನಡೆಯುತ್ತಿದೆ. ಗುತ್ತಿಗೆದಾರ ವೆಂಕಟರೆಡ್ಡಿ ಟೆಂಡರ್ ಪಡೆದಿದ್ದಾರೆ.
₹ 10 ಕೋಟಿ ವೆಚ್ಚದಲ್ಲಿ ಈ ಭವನ ನಿರ್ಮಾಣವಾಗುತ್ತಿದೆ. ಸದ್ಯ ₹ 4.90 ಕೋಟಿ ಮಂಜೂರಾಗಿದ್ದು ಈ ಪೈಕಿ 3.30ಕೋಟಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಎಂಜಿನಿಯರ್ ವೆಂಕಟೇಶ್ ತಿಳಿಸಿದ್ದಾರೆ.
ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಿ ವೀರಣ್ಣ, ಹೊದಿಗೆರೆ ರಮೇಶ್, ಹದಡಿ ಹಾಲಪ್ಪ, ಹುಲಿಕಟ್ಟೆ ಶಿವಣ್ಣ, ಶ್ಯಾಗಲೆ ಮಂಜುನಾಥ್, ನಾಗರಾಜ್ ಬೆಳವನೂರ, ಮಲ್ಲಾಪುರ ದೇವರಾಜ್, ಎಂಜಿನಿಯರ್ಗಳಾದ ಪರಮೇಶ್ವರಪ್ಪ, ಪುಟ್ಟಸ್ವಾಮಿ ನಾಗರಾಜ್, ರವಿಪ್ರಕಾಶ್, ಮುಖಂಡರು ಹಾಗೂ ಅಧಿಕಾರಿಗಳು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.