ಸಮಾಜದ ಬೇಡಿಕೆ ಈಡೇರಿಕೆಗೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಪುಟದ ಸದಸ್ಯರು, ಸಚಿವ ಶ್ರೀರಾಮುಲು ಸೇರಿ ಸಮುದಾಯದ ಎಲ್ಲಾ ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ಸಮುದಾಯದ ಪ್ರಮುಖ ಬೇಡಿಕೆಯಾದ ಶೇ 7.5 ಮೀಸಲಾತಿಯನ್ನೂ ಜಾರಿಗೊಳಿಸಬೇಕು ಎಂದು ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.