<p><strong>ದಾವಣಗೆರೆ:</strong> ಸಂತೆ, ವಾರದ ಸಂತೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿರುವ ಮಾಹಿತಿ ಇಲ್ಲದ ತರಕಾರಿ ವ್ಯಾಪಾರಿಗಳು ಬೆಳಿಗ್ಗೆ 10 ಗಂಟೆಯ ವರೆಗೆ ವ್ಯಾಪಾರ ಮಾಡಲು ಕೆ.ಆರ್. ಮಾರುಕಟ್ಟೆಗೆ ಬಂದಿದ್ದರು. ತಹಶೀಲ್ದಾರ್ ಗಿರೀಶ್ ಮತ್ತು ಸಿಬ್ಬಂದಿ ಅಲ್ಲಿಗೆ ತೆರಳಿ ಭಾನುವಾರದ ಸಂತೆ ಬಂದ್ ಮಾಡಿಸಿದರು.</p>.<p>ರಾಜ್ಯ ಸರ್ಕಾರ ಈ ಹಿಂದೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ 10 ಗಂಟೆಯ ವರೆಗೆ ಅವಕಾಶ ಮಾಡಿಕೊಟ್ಟಿತ್ತು. ಆದರೆ, ವ್ಯಾಪಕವಾಗಿ ಕೊರೊನಾ ಹರಡುತ್ತಿರುವುದರಿಂದ ಶನಿವಾರ ಮಾರ್ಗಸೂಚಿಗೆ ತಿದ್ದುಪಡಿ ತಂದು ವಾರದ ಸಂತೆ ಸಂಪೂರ್ಣ ಬಂದ್ ಮಾಡಿಸಲು ಆದೇಶ ಹೊರಡಿ ಸಿತ್ತು. ಈ ಆದೇಶದಂತೆ ಬೆಳಿಗ್ಗೆ 6ಕ್ಕೆ ತಹಶೀಲ್ದಾರ್ ಸಂತೆ ಬಂದ್ ಮಾಡಲು ಬಂದಾಗ ಕೆಲ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದರು. ತಳ್ಳುಗಾಡಿಯಲ್ಲಿ ತರಕಾರಿ ವ್ಯಾಪಾರ ಮಾಡಿ. ಈಗಿನ ಮಾರ್ಗಸೂಚಿ ಪ್ರಕಾರ ಸಂತೆ ನಡೆಸುವಂತಿಲ್ಲ ಎಂದು ಅವರ ಮನವೊಲಿಸಿದರು.</p>.<p>ಕಂದಾಯ ನಿರೀಕ್ಷಕರು, ಗ್ರಾಮ ಕರಣಿಕರು, ಪೊಲೀಸರು ಈ ಸಂದರ್ಭದಲ್ಲಿ ಇದ್ದರು. ಎಲ್ಲ ಕಡೆಗಳಲ್ಲಿ ತರಕಾರಿ, ಅಗತ್ಯ ವಸ್ತುಗಳ ಖರೀದಿಗೆ ಭಾರಿ ಸಂಖ್ಯೆಯ ಜನ ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಸಂತೆ, ವಾರದ ಸಂತೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿರುವ ಮಾಹಿತಿ ಇಲ್ಲದ ತರಕಾರಿ ವ್ಯಾಪಾರಿಗಳು ಬೆಳಿಗ್ಗೆ 10 ಗಂಟೆಯ ವರೆಗೆ ವ್ಯಾಪಾರ ಮಾಡಲು ಕೆ.ಆರ್. ಮಾರುಕಟ್ಟೆಗೆ ಬಂದಿದ್ದರು. ತಹಶೀಲ್ದಾರ್ ಗಿರೀಶ್ ಮತ್ತು ಸಿಬ್ಬಂದಿ ಅಲ್ಲಿಗೆ ತೆರಳಿ ಭಾನುವಾರದ ಸಂತೆ ಬಂದ್ ಮಾಡಿಸಿದರು.</p>.<p>ರಾಜ್ಯ ಸರ್ಕಾರ ಈ ಹಿಂದೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ 10 ಗಂಟೆಯ ವರೆಗೆ ಅವಕಾಶ ಮಾಡಿಕೊಟ್ಟಿತ್ತು. ಆದರೆ, ವ್ಯಾಪಕವಾಗಿ ಕೊರೊನಾ ಹರಡುತ್ತಿರುವುದರಿಂದ ಶನಿವಾರ ಮಾರ್ಗಸೂಚಿಗೆ ತಿದ್ದುಪಡಿ ತಂದು ವಾರದ ಸಂತೆ ಸಂಪೂರ್ಣ ಬಂದ್ ಮಾಡಿಸಲು ಆದೇಶ ಹೊರಡಿ ಸಿತ್ತು. ಈ ಆದೇಶದಂತೆ ಬೆಳಿಗ್ಗೆ 6ಕ್ಕೆ ತಹಶೀಲ್ದಾರ್ ಸಂತೆ ಬಂದ್ ಮಾಡಲು ಬಂದಾಗ ಕೆಲ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದರು. ತಳ್ಳುಗಾಡಿಯಲ್ಲಿ ತರಕಾರಿ ವ್ಯಾಪಾರ ಮಾಡಿ. ಈಗಿನ ಮಾರ್ಗಸೂಚಿ ಪ್ರಕಾರ ಸಂತೆ ನಡೆಸುವಂತಿಲ್ಲ ಎಂದು ಅವರ ಮನವೊಲಿಸಿದರು.</p>.<p>ಕಂದಾಯ ನಿರೀಕ್ಷಕರು, ಗ್ರಾಮ ಕರಣಿಕರು, ಪೊಲೀಸರು ಈ ಸಂದರ್ಭದಲ್ಲಿ ಇದ್ದರು. ಎಲ್ಲ ಕಡೆಗಳಲ್ಲಿ ತರಕಾರಿ, ಅಗತ್ಯ ವಸ್ತುಗಳ ಖರೀದಿಗೆ ಭಾರಿ ಸಂಖ್ಯೆಯ ಜನ ಸೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>