ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿಗಿಳಿದು ಸಂತೆ ಬಂದ್‌ ಮಾಡಿದ ತಹಶೀಲ್ದಾರ್‌

Last Updated 3 ಮೇ 2021, 4:06 IST
ಅಕ್ಷರ ಗಾತ್ರ

ದಾವಣಗೆರೆ: ಸಂತೆ, ವಾರದ ಸಂತೆಗಳನ್ನು ರದ್ದು ಮಾಡಿ ಆದೇಶ ಹೊರಡಿಸಿರುವ ಮಾಹಿತಿ ಇಲ್ಲದ ತರಕಾರಿ ವ್ಯಾಪಾರಿಗಳು ಬೆಳಿಗ್ಗೆ 10 ಗಂಟೆಯ ವರೆಗೆ ವ್ಯಾಪಾರ ಮಾಡಲು ಕೆ.ಆರ್‌. ಮಾರುಕಟ್ಟೆಗೆ ಬಂದಿದ್ದರು. ತಹಶೀಲ್ದಾರ್‌ ಗಿರೀಶ್‌ ಮತ್ತು ಸಿಬ್ಬಂದಿ ಅಲ್ಲಿಗೆ ತೆರಳಿ ಭಾನುವಾರದ ಸಂತೆ ಬಂದ್‌ ಮಾಡಿಸಿದರು.

ರಾಜ್ಯ ಸರ್ಕಾರ ಈ ಹಿಂದೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ 10 ಗಂಟೆಯ ವರೆಗೆ ಅವಕಾಶ ಮಾಡಿಕೊಟ್ಟಿತ್ತು. ಆದರೆ, ವ್ಯಾಪಕವಾಗಿ ಕೊರೊನಾ ಹರಡುತ್ತಿರುವುದರಿಂದ ಶನಿವಾರ ಮಾರ್ಗಸೂಚಿಗೆ ತಿದ್ದುಪಡಿ ತಂದು ವಾರದ ಸಂತೆ ಸಂಪೂರ್ಣ ಬಂದ್ ಮಾಡಿಸಲು ಆದೇಶ ಹೊರಡಿ ಸಿತ್ತು. ಈ ಆದೇಶದಂತೆ ಬೆಳಿಗ್ಗೆ 6ಕ್ಕೆ ತಹಶೀಲ್ದಾರ್‌ ಸಂತೆ ಬಂದ್‌ ಮಾಡಲು ಬಂದಾಗ ಕೆಲ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದರು. ತಳ್ಳುಗಾಡಿಯಲ್ಲಿ ತರಕಾರಿ ವ್ಯಾಪಾರ ಮಾಡಿ. ಈಗಿನ ಮಾರ್ಗಸೂಚಿ ಪ್ರಕಾರ ಸಂತೆ ನಡೆಸುವಂತಿಲ್ಲ ಎಂದು ಅವರ ಮನವೊಲಿಸಿದರು.

ಕಂದಾಯ ನಿರೀಕ್ಷಕರು, ಗ್ರಾಮ ಕರಣಿಕರು, ಪೊಲೀಸರು ಈ ಸಂದರ್ಭದಲ್ಲಿ ಇದ್ದರು. ಎಲ್ಲ ಕಡೆಗಳಲ್ಲಿ ತರಕಾರಿ, ಅಗತ್ಯ ವಸ್ತುಗಳ ಖರೀದಿಗೆ ಭಾರಿ ಸಂಖ್ಯೆಯ ಜನ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT