<p><strong>ಸುರಹೊನ್ನೆ(ನ್ಯಾಮತಿ):</strong> ತಾಲ್ಲೂಕಿನ ಸುರಹೊನ್ನೆ ಗ್ರಾಮದ ಪಿಎಂಶ್ರೀ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಹ ಶಿಕ್ಷಕರು ಕೈಗೆ ಕಪ್ಪುಪಟ್ಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು. </p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಾಮಪ್ಪ ಮಾತನಾಡಿ, ಅಖಿಲ ಭಾರತ ಶಿಕ್ಷಕರ ಫೆಡರೇಷನ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸೂಚನೆಯಂತೆ ಪ್ರತಿಭಟನೆ ನಡೆಸಿದ್ದೇವೆ ಎಂದರು. </p>.<p>‘ಕೇಂದ್ರ ಮಾದರಿ ವೇತನ ನೀಡಬೇಕು. ಖಾಯಂ ಶಿಕ್ಷಕರ ನೇಮಕಾತಿ, ಒಪಿಎಸ್ ಜಾರಿಗೊಳಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಲೆಯ ಎಲ್ಲಾ ಸಹಶಿಕ್ಷಕರು ತೋಳಿಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ್ದೇವೆ’ ಎಂದು ತಿಳಿಸಿದರು.</p>
<p><strong>ಸುರಹೊನ್ನೆ(ನ್ಯಾಮತಿ):</strong> ತಾಲ್ಲೂಕಿನ ಸುರಹೊನ್ನೆ ಗ್ರಾಮದ ಪಿಎಂಶ್ರೀ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಹ ಶಿಕ್ಷಕರು ಕೈಗೆ ಕಪ್ಪುಪಟ್ಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದರು. </p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಾಮಪ್ಪ ಮಾತನಾಡಿ, ಅಖಿಲ ಭಾರತ ಶಿಕ್ಷಕರ ಫೆಡರೇಷನ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸೂಚನೆಯಂತೆ ಪ್ರತಿಭಟನೆ ನಡೆಸಿದ್ದೇವೆ ಎಂದರು. </p>.<p>‘ಕೇಂದ್ರ ಮಾದರಿ ವೇತನ ನೀಡಬೇಕು. ಖಾಯಂ ಶಿಕ್ಷಕರ ನೇಮಕಾತಿ, ಒಪಿಎಸ್ ಜಾರಿಗೊಳಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಲೆಯ ಎಲ್ಲಾ ಸಹಶಿಕ್ಷಕರು ತೋಳಿಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ್ದೇವೆ’ ಎಂದು ತಿಳಿಸಿದರು.</p>