<p><strong>ಹರಪನಹಳ್ಳಿ</strong>: ಗಾಂಧೀಜಿ ಟೋಪಿ ಧರಿಸುವುದನ್ನು ಕಡ್ಡಾಯಗೊಳಿಸಿ ನಾಡಿನ ಗಮನ ಸೆಳೆದಿರುವ ತಾಲ್ಲೂಕಿನ ಚಿಗಟೇರಿ ಗ್ರಾಮದ ನಾರದಮುನಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಜನಾರ್ದನ ರೆಡ್ಡಿ ಅವರು ವಿಜಯನಗರ-ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯ 2021-22ನೇ ಸಾಲಿನ ‘ಜಿಲ್ಲಾ ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.</p>.<p>ಚಿಗಟೇರಿ ನಾರದಮುನಿ ವಿದ್ಯಾವರ್ಧಕ ಸಂಘದಿಂದ 1963ರಲ್ಲಿ ಶುರುವಾದ ನಾರದಮುನಿ ಪ್ರೌಢಶಾಲೆಗೆ ದೈಹಿಕ ಶಿಕ್ಷಣ ಶಿಕ್ಷಕರಾಗಿ ಜನಾರ್ದನ ರೆಡ್ಡಿ ವರು 2003ರಲ್ಲಿ ನೇಮಕಗೊಂಡಿದ್ದರು. 19 ವರ್ಷಗಳ ಸುದೀರ್ಘ ಸೇವೆಯಲ್ಲಿ ವಿದ್ಯಾರ್ಥಿಗಳು, ಪೋಷಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.</p>.<p>ಗುಡೆಕೋಟೆ ಸರ್ವೋದಯ ಕೇಂದ್ರ ವಿದ್ಯಾಲಯ, ದೋಣಿಮಲೈ, ಬೆಳಗಾವಿ ಖಾಸಗಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿಯೂ ಕೆಲಸ ಮಾಡಿದ್ದಾರೆ. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕೊಕ್ಕೊ ಆಟದಲ್ಲಿ ನಾರದಮುನಿ ಶಾಲೆಯ ತಂಡ ಪ್ರತಿ ವರ್ಷವೂ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಗಮನ ಸೆಳೆಯುತ್ತದೆ.</p>.<p>ಶಿಕ್ಷಕ ಜನಾರ್ದನ ರೆಡ್ಡಿ ಮಾತನಾಡಿ, ‘ನನಗೆ ಪ್ರಶಸ್ತಿ ಬಂದಿರುವುದು ಜವಾಬ್ದಾರಿಯನ್ನು ಹೆಚ್ಚಿಸಿದೆ. ನಾರದಮುನಿ ದೇವರ ಆಶೀರ್ವಾದ, ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು, ಈಗಿರುವ ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿ ಸಂಪೂರ್ಣ ಸಹಕಾರದಿಂದ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ, ಶಾಲಾಡಳಿತ ಮಂಡಳಿ, ಗ್ರಾಮಸ್ಥರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ತಿಳಿಸಿದರು.</p>.<p>ಅಧ್ಯಕ್ಷ ಬಸವನಗೌಡ ಮತ್ತು ಕಾರ್ಯದರ್ಶಿ ಎಂ. ನಿತ್ಯಾನಂದಪ್ಪ ಮಾತನಾಡಿ, ‘ಜನಾರ್ದನ ರೆಡ್ಡಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ</strong>: ಗಾಂಧೀಜಿ ಟೋಪಿ ಧರಿಸುವುದನ್ನು ಕಡ್ಡಾಯಗೊಳಿಸಿ ನಾಡಿನ ಗಮನ ಸೆಳೆದಿರುವ ತಾಲ್ಲೂಕಿನ ಚಿಗಟೇರಿ ಗ್ರಾಮದ ನಾರದಮುನಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಜನಾರ್ದನ ರೆಡ್ಡಿ ಅವರು ವಿಜಯನಗರ-ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯ 2021-22ನೇ ಸಾಲಿನ ‘ಜಿಲ್ಲಾ ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.</p>.<p>ಚಿಗಟೇರಿ ನಾರದಮುನಿ ವಿದ್ಯಾವರ್ಧಕ ಸಂಘದಿಂದ 1963ರಲ್ಲಿ ಶುರುವಾದ ನಾರದಮುನಿ ಪ್ರೌಢಶಾಲೆಗೆ ದೈಹಿಕ ಶಿಕ್ಷಣ ಶಿಕ್ಷಕರಾಗಿ ಜನಾರ್ದನ ರೆಡ್ಡಿ ವರು 2003ರಲ್ಲಿ ನೇಮಕಗೊಂಡಿದ್ದರು. 19 ವರ್ಷಗಳ ಸುದೀರ್ಘ ಸೇವೆಯಲ್ಲಿ ವಿದ್ಯಾರ್ಥಿಗಳು, ಪೋಷಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.</p>.<p>ಗುಡೆಕೋಟೆ ಸರ್ವೋದಯ ಕೇಂದ್ರ ವಿದ್ಯಾಲಯ, ದೋಣಿಮಲೈ, ಬೆಳಗಾವಿ ಖಾಸಗಿ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿಯೂ ಕೆಲಸ ಮಾಡಿದ್ದಾರೆ. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕೊಕ್ಕೊ ಆಟದಲ್ಲಿ ನಾರದಮುನಿ ಶಾಲೆಯ ತಂಡ ಪ್ರತಿ ವರ್ಷವೂ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಗಮನ ಸೆಳೆಯುತ್ತದೆ.</p>.<p>ಶಿಕ್ಷಕ ಜನಾರ್ದನ ರೆಡ್ಡಿ ಮಾತನಾಡಿ, ‘ನನಗೆ ಪ್ರಶಸ್ತಿ ಬಂದಿರುವುದು ಜವಾಬ್ದಾರಿಯನ್ನು ಹೆಚ್ಚಿಸಿದೆ. ನಾರದಮುನಿ ದೇವರ ಆಶೀರ್ವಾದ, ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು, ಈಗಿರುವ ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿ ಸಂಪೂರ್ಣ ಸಹಕಾರದಿಂದ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ, ಶಾಲಾಡಳಿತ ಮಂಡಳಿ, ಗ್ರಾಮಸ್ಥರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ತಿಳಿಸಿದರು.</p>.<p>ಅಧ್ಯಕ್ಷ ಬಸವನಗೌಡ ಮತ್ತು ಕಾರ್ಯದರ್ಶಿ ಎಂ. ನಿತ್ಯಾನಂದಪ್ಪ ಮಾತನಾಡಿ, ‘ಜನಾರ್ದನ ರೆಡ್ಡಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>