ಶಿಕ್ಷಕ ಜನಾರ್ದನ ರೆಡ್ಡಿ ಮಾತನಾಡಿ, ‘ನನಗೆ ಪ್ರಶಸ್ತಿ ಬಂದಿರುವುದು ಜವಾಬ್ದಾರಿಯನ್ನು ಹೆಚ್ಚಿಸಿದೆ. ನಾರದಮುನಿ ದೇವರ ಆಶೀರ್ವಾದ, ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು, ಈಗಿರುವ ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿ ಸಂಪೂರ್ಣ ಸಹಕಾರದಿಂದ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ, ಶಾಲಾಡಳಿತ ಮಂಡಳಿ, ಗ್ರಾಮಸ್ಥರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ತಿಳಿಸಿದರು.