ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸದ ಸತೀಶ್ ಪೂಜಾರಿ, ‘ಭೈರವೇಶ್ವರ ಮಂದಿರಕ್ಕೆ ಹಲವು ಶತಮಾನಗಳ ಇತಿಹಾಸ ಇದೆ. ಸ್ವಾತಂತ್ರ್ಯ ಪೂರ್ವದಿಂದಲೂ ಮುಸ್ಲಿಂ ದೊರೆಗಳು, ಬ್ರಿಟಿಷರು ಹಿಂದೂ ದೇವಾಲಯಗಳನ್ನು ತೆರವುಗೊಳಿಸಿದ್ದಾರೆ. ಆಗಲೂ ಪ್ರತಿರೋಧ ವ್ಯಕ್ತವಾಗಿತ್ತು. ಈಗಲೂ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ನಮ್ಮ ಉಳಿವಿಗಾಗಿ ತೆರವು ಕಾರ್ಯಾಚರಣೆಗೆ ಪ್ರತಿರೋಧ ಅನಿವಾರ್ಯ. ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಸರಿಯಾಗಿ ತಿಳಿದುಕೊಳ್ಳದೇ ಅಧಿಕಾರಿಗಳು ಪುರಾತನ ದೇವಾಲಯಗಳನ್ನು ತೆರವುಗೊಳಿಸುತ್ತಿದ್ದಾರೆ. ಇಂತಹ ತೆರವು ಕಾರ್ಯಾಚರಣೆ ಮುಂದುವರಿಸಿದರೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿ ಯಾವುದೇ ಅಧಿಕಾರಿಗಳ ತಲೆದಂಡ ಮಾಡುತ್ತೇವೆ ಎಂದು ಹೇಳಿದ್ದೆ. ಆದರೆ ನನ್ನ ಹೇಳಿಕೆಯನ್ನು ತಿರುಚಿ ವಿಡಿಯೊ ಹರಿಬಿಡಲಾಗಿದೆ’ ಎಂದು ಸ್ಪಷ್ಟನೆ ನೀಡಿದರು.