<p><strong>ದಾವಣಗೆರೆ</strong>: ರೇಣುಕಾ ಯಲ್ಲಮ್ಮ ದೇವಿಯ ನೂತನ ದೇಗುಲ ನಿರ್ಮಾಣದ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುತ್ತಿದ್ದ ಗುಂಪೊಂದನ್ನು ತಾಲ್ಲೂಕಿನ ಈಚಘಟ್ಟ ಗ್ರಾಮದ ಜನರು ಮಂಗಳವಾರ ಹಿಡಿದು ದೇಗುಲವೊಂದರಲ್ಲಿ ಕೂಡಿಹಾಕಿ ಥಳಿಸಿದ್ದಾರೆ.</p><p>ಥಳಿತಕ್ಕೆ ಒಳಗಾದವರನ್ನು ನಾರಾಯಣ, ಮಂಜುನಾಥ್, ಚಂದ್ರಶೇಖರ್, ರಮೇಶ್ ಹಾಗೂ ಶಿವಪ್ಪ ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಕಾರೇಹಳ್ಳಿ ದಾಸರಹಟ್ಟಿ ಗ್ರಾಮದವರು ಎಂದು ಅವರು ಹೇಳಿಕೊಂಡಿದ್ದಾರೆ.</p><p>ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕಿನ ಕೆಲ ಗ್ರಾಮಗಳಿಗೆ ಭೇಟಿ ನೀಡಿದ ಗುಂಪು, ಕಾರೇಹಳ್ಳಿ ದಾಸರಹಟ್ಟಿಯಲ್ಲಿ ರೇಣುಕಾ ಯಲ್ಲಮ್ಮದೇವಿ ದೇಗುಲ ನಿರ್ಮಾಣದ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಿದೆ. ಗ್ರಾಮದ ಸ್ಥಿತಿವಂತರ ಮನೆಗಳಿಗೆ ಭೇಟಿ ನೀಡಿ ದೇಗುಲದ ಕರಪತ್ರ ಕೈಗಿಟ್ಟು ದೇಣಿಗೆ ಕೇಳಿದೆ. ಅನೇಕರು ₹ 1,000ದಿಂದ ₹ 25,000ದವರೆಗೆ ದೇಣಿಗೆ ನೀಡಿದ್ದಾರೆ.</p><p>ಈಚಘಟ್ಟ ಗ್ರಾಮಕ್ಕೆ ಮಂಗಳವಾರ ಬಂದಿದ್ದ ಗುಂಪು ಅನುಮಾನಸ್ಪದವಾಗಿ ವರ್ತಿಸಿದೆ. ಸಂಶಯಗೊಂಡ ಗ್ರಾಮಸ್ಥರು ಕರಪತ್ರ, ರಸೀದಿಯನ್ನು ಪರಿಶೀಲಿಸಿದ್ದಾರೆ. ಕಾರೇಹಳ್ಳಿ ದಾಸರಹಟ್ಟಿ ಗ್ರಾಮಸ್ಥರನ್ನು ಸಂಪರ್ಕಿಸಿ ವಿಚಾರಿಸಿದ್ದಾರೆ. ಆ ಗ್ರಾಮದಲ್ಲಿ ದೇಗುಲ ನಿರ್ಮಾಣ ಆಗುತ್ತಿಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಜನರು ದೇಣಿಗೆ ಸಂಗ್ರಹಕ್ಕೆ ಬಂದಿದ್ದವರನ್ನು ದೇಗುಲದಲ್ಲಿ ಕೂಡಿಹಾಕಿ ಥಳಿಸಿದ್ದಾರೆ.</p><p>‘ರೇಣುಕಾ ಯಲ್ಲಮ್ಮದೇವಿ ಹಾಗೂ ಆಂಜನೇಯ ಚಿತ್ರವನ್ನು ಹಿಡಿದು ಮನೆ ಪ್ರವೇಶಿಸುತ್ತಿದ್ದರು. ದೇಣಿಗೆಯನ್ನು ನೀಡುವಂತೆ ಪಟ್ಟು ಹಿಡಿಯುತ್ತಿದ್ದರು. ಅನುಮಾನಗೊಂಡು ಪರಿಶೀಲಿಸಿ ದೇಗುಲಕ್ಕೆ ಕರೆದೊಯ್ದು ವಿಚಾರಿಸಿದಾಗ ಹೆದರಿ ಹಣ ಮರಳಿಸಿದರು’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p><p>ದೇಗುಲದಲ್ಲಿ ಕೂಡಿ ಹಾಕಿದ ಮಾಹಿತಿ ತಿಳಿದು ಮಾಯಕೊಂಡ ಠಾಣೆಯ ಪೊಲೀಸರು ಈಚಘಟ್ಟ ಗ್ರಾಮಕ್ಕೆ ಭೇಟಿ ನೀಡಿದ್ದರು. ದೇಣಿಗೆ ಪಡೆದ ಹಣವನ್ನು ಮರಳಿಸಿದ ಬಳಿಕ ಗ್ರಾಮಸ್ಥರು ಗುಂಪನ್ನು ಬಿಡುಗಡೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ರೇಣುಕಾ ಯಲ್ಲಮ್ಮ ದೇವಿಯ ನೂತನ ದೇಗುಲ ನಿರ್ಮಾಣದ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುತ್ತಿದ್ದ ಗುಂಪೊಂದನ್ನು ತಾಲ್ಲೂಕಿನ ಈಚಘಟ್ಟ ಗ್ರಾಮದ ಜನರು ಮಂಗಳವಾರ ಹಿಡಿದು ದೇಗುಲವೊಂದರಲ್ಲಿ ಕೂಡಿಹಾಕಿ ಥಳಿಸಿದ್ದಾರೆ.</p><p>ಥಳಿತಕ್ಕೆ ಒಳಗಾದವರನ್ನು ನಾರಾಯಣ, ಮಂಜುನಾಥ್, ಚಂದ್ರಶೇಖರ್, ರಮೇಶ್ ಹಾಗೂ ಶಿವಪ್ಪ ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಕಾರೇಹಳ್ಳಿ ದಾಸರಹಟ್ಟಿ ಗ್ರಾಮದವರು ಎಂದು ಅವರು ಹೇಳಿಕೊಂಡಿದ್ದಾರೆ.</p><p>ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕಿನ ಕೆಲ ಗ್ರಾಮಗಳಿಗೆ ಭೇಟಿ ನೀಡಿದ ಗುಂಪು, ಕಾರೇಹಳ್ಳಿ ದಾಸರಹಟ್ಟಿಯಲ್ಲಿ ರೇಣುಕಾ ಯಲ್ಲಮ್ಮದೇವಿ ದೇಗುಲ ನಿರ್ಮಾಣದ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಿದೆ. ಗ್ರಾಮದ ಸ್ಥಿತಿವಂತರ ಮನೆಗಳಿಗೆ ಭೇಟಿ ನೀಡಿ ದೇಗುಲದ ಕರಪತ್ರ ಕೈಗಿಟ್ಟು ದೇಣಿಗೆ ಕೇಳಿದೆ. ಅನೇಕರು ₹ 1,000ದಿಂದ ₹ 25,000ದವರೆಗೆ ದೇಣಿಗೆ ನೀಡಿದ್ದಾರೆ.</p><p>ಈಚಘಟ್ಟ ಗ್ರಾಮಕ್ಕೆ ಮಂಗಳವಾರ ಬಂದಿದ್ದ ಗುಂಪು ಅನುಮಾನಸ್ಪದವಾಗಿ ವರ್ತಿಸಿದೆ. ಸಂಶಯಗೊಂಡ ಗ್ರಾಮಸ್ಥರು ಕರಪತ್ರ, ರಸೀದಿಯನ್ನು ಪರಿಶೀಲಿಸಿದ್ದಾರೆ. ಕಾರೇಹಳ್ಳಿ ದಾಸರಹಟ್ಟಿ ಗ್ರಾಮಸ್ಥರನ್ನು ಸಂಪರ್ಕಿಸಿ ವಿಚಾರಿಸಿದ್ದಾರೆ. ಆ ಗ್ರಾಮದಲ್ಲಿ ದೇಗುಲ ನಿರ್ಮಾಣ ಆಗುತ್ತಿಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಜನರು ದೇಣಿಗೆ ಸಂಗ್ರಹಕ್ಕೆ ಬಂದಿದ್ದವರನ್ನು ದೇಗುಲದಲ್ಲಿ ಕೂಡಿಹಾಕಿ ಥಳಿಸಿದ್ದಾರೆ.</p><p>‘ರೇಣುಕಾ ಯಲ್ಲಮ್ಮದೇವಿ ಹಾಗೂ ಆಂಜನೇಯ ಚಿತ್ರವನ್ನು ಹಿಡಿದು ಮನೆ ಪ್ರವೇಶಿಸುತ್ತಿದ್ದರು. ದೇಣಿಗೆಯನ್ನು ನೀಡುವಂತೆ ಪಟ್ಟು ಹಿಡಿಯುತ್ತಿದ್ದರು. ಅನುಮಾನಗೊಂಡು ಪರಿಶೀಲಿಸಿ ದೇಗುಲಕ್ಕೆ ಕರೆದೊಯ್ದು ವಿಚಾರಿಸಿದಾಗ ಹೆದರಿ ಹಣ ಮರಳಿಸಿದರು’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p><p>ದೇಗುಲದಲ್ಲಿ ಕೂಡಿ ಹಾಕಿದ ಮಾಹಿತಿ ತಿಳಿದು ಮಾಯಕೊಂಡ ಠಾಣೆಯ ಪೊಲೀಸರು ಈಚಘಟ್ಟ ಗ್ರಾಮಕ್ಕೆ ಭೇಟಿ ನೀಡಿದ್ದರು. ದೇಣಿಗೆ ಪಡೆದ ಹಣವನ್ನು ಮರಳಿಸಿದ ಬಳಿಕ ಗ್ರಾಮಸ್ಥರು ಗುಂಪನ್ನು ಬಿಡುಗಡೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>