<p><strong>ಉಚ್ಚಂಗಿದುರ್ಗ: </strong>ಗ್ರಾಮದ ಐತಿಹಾಸಿಕ ಉಚ್ಚೆಂಗೆಮ್ಮ ದೇವಿ ದೇವಾಲಯವು ಸೋಮವಾರದಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ.<br /><br />ಕೋವಿಡ್ 2ನೇ ಅಲೆ ನಿಯಂತ್ರಣದ ಕಾರಣ ಹೇರಿದ್ದ ಲಾಕ್ಡೌನ್ನಿಂದಾಗಿ ಏಪ್ರಿಲ್ 12ರಿಂದ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಎರಡು ತಿಂಗಳುಗಳ ಬಳಿಕ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ.<br /><br />ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿನೊಂದಿಗೆ ದೇವಾಲಯಗಳನ್ನು ಭಕ್ತರ ಪ್ರವೇಶಕ್ಕೆ ತೆರೆಯಲು ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮುಜಾರಾಯಿ ಇಲಾಖೆ ಸಿಬ್ಬಂದಿ ಭಾನುವಾರ ದೇವಸ್ಥಾನವನ್ನು ಸ್ವಚ್ಛಗೊಳಿಸಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡುವ ಕಾರ್ಯದಲ್ಲಿ ತೊಡಗಿದ್ದರು.<br /><br />ಭಕ್ತರು ಸೇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆಯ ಕುರಿತು ಜಾಗೃತಿ ಫಲಕಗಳನ್ನು ಅಲ್ಲಲ್ಲಿ ಅಳವಡಿಸಲಾಗಿದೆ.<br /><br />‘ದೇವಸ್ಥಾನದಲ್ಲಿ ದಾಸೋಹದ ವ್ಯವಸ್ಥೆ, ಭಕ್ತರಿಗೆ ತೀರ್ಥ ಪ್ರಸಾದ ಸೇವೆ, ಹುಣ್ಣಿಮೆ, ಉತ್ಸವಗಳು ನಡೆಯುವುದಿಲ್ಲ. ದೇವಸ್ಥಾನಕ್ಕೆ ಬರುವ ದಾರಿಯಲ್ಲಿ ಹೂವು, ಹಣ್ಣುಕಾಯಿಗಳನ್ನು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಉಚ್ಚೆಂಗೆಮ್ಮ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಚ್ಚಂಗಿದುರ್ಗ: </strong>ಗ್ರಾಮದ ಐತಿಹಾಸಿಕ ಉಚ್ಚೆಂಗೆಮ್ಮ ದೇವಿ ದೇವಾಲಯವು ಸೋಮವಾರದಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ.<br /><br />ಕೋವಿಡ್ 2ನೇ ಅಲೆ ನಿಯಂತ್ರಣದ ಕಾರಣ ಹೇರಿದ್ದ ಲಾಕ್ಡೌನ್ನಿಂದಾಗಿ ಏಪ್ರಿಲ್ 12ರಿಂದ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಎರಡು ತಿಂಗಳುಗಳ ಬಳಿಕ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ.<br /><br />ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿನೊಂದಿಗೆ ದೇವಾಲಯಗಳನ್ನು ಭಕ್ತರ ಪ್ರವೇಶಕ್ಕೆ ತೆರೆಯಲು ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮುಜಾರಾಯಿ ಇಲಾಖೆ ಸಿಬ್ಬಂದಿ ಭಾನುವಾರ ದೇವಸ್ಥಾನವನ್ನು ಸ್ವಚ್ಛಗೊಳಿಸಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡುವ ಕಾರ್ಯದಲ್ಲಿ ತೊಡಗಿದ್ದರು.<br /><br />ಭಕ್ತರು ಸೇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆಯ ಕುರಿತು ಜಾಗೃತಿ ಫಲಕಗಳನ್ನು ಅಲ್ಲಲ್ಲಿ ಅಳವಡಿಸಲಾಗಿದೆ.<br /><br />‘ದೇವಸ್ಥಾನದಲ್ಲಿ ದಾಸೋಹದ ವ್ಯವಸ್ಥೆ, ಭಕ್ತರಿಗೆ ತೀರ್ಥ ಪ್ರಸಾದ ಸೇವೆ, ಹುಣ್ಣಿಮೆ, ಉತ್ಸವಗಳು ನಡೆಯುವುದಿಲ್ಲ. ದೇವಸ್ಥಾನಕ್ಕೆ ಬರುವ ದಾರಿಯಲ್ಲಿ ಹೂವು, ಹಣ್ಣುಕಾಯಿಗಳನ್ನು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಉಚ್ಚೆಂಗೆಮ್ಮ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>