<p><strong>ದಾವಣಗೆರೆ:</strong> ‘ದಾವಣಗೆರೆ ದೊಡ್ಡ ವ್ಯಾಪಾರ ಕೇಂದ್ರವಾದರೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ತಿಂಗಳಿಗೆ ಕೇವಲ 10 ದೂರುಗಳು ಬರುತ್ತಿರುವುದು ಕಾನೂನಿನ ಅರಿವಿನ ಕೊರತೆ ಇದೆ ಎಂಬುದನ್ನು ತಿಳಿಸುತ್ತದೆ’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ವಿಷಾದ ವ್ಯಕ್ತಪಡಿಸಿದರು.</p>.<p>ಜಿಲ್ಲಾಡಳಿತ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳ ಸಹಯೋಗದಲ್ಲಿ ನಗರದ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಮಂಗಳವಾರ ನಡೆದ ವಿಶ್ವ ಗ್ರಾಹಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘8 ಲಕ್ಷ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಒಂದು ವರ್ಷಕ್ಕೆ 120 ಪ್ರಕರಣಗಳು ಮಾತ್ರ ದಾಖಲಾಗುತ್ತಿವೆ. ಹಾಗಾದರೆ ಎಲ್ಲ ವ್ಯಾಪಾರ ವಹಿವಾಟುಗಳು ಕಾನೂನಿನ್ವಯ ಆಗುತ್ತಿವೆಯೇ ಅಥವಾ ಕಾನೂನಿನ ಅರಿವಿನ ಕೊರತೆಯಿಂದ ಗ್ರಾಹಕರು ಆಯೋಗಕ್ಕೆ ದೂರು ನೀಡುತ್ತಿಲ್ಲವೇ ಎಂಬ ಪ್ರಶ್ನೆ ಹಾಕಿಕೊಳ್ಳಬೇಕು’ ಎಂದರು.</p>.<p>‘ನಾವು ಕೊಳ್ಳುವ ಪ್ರತಿ ವಸ್ತುವಿಗೂ ರಶೀದಿ ಪಡೆದರೆ ಮಾತ್ರ ಗ್ರಾಹಕರ ಆಯೋಗಕ್ಕೆ ದೂರು ನೀಡಿ ನ್ಯಾಯ ಪಡೆಯಲು ಸಾಧ್ಯ.ಗ್ರಾಹಕರು ಖರೀದಿಸಿದ ಉತ್ಪನ್ನ ಅಥವಾ ಸೇವೆಗಳಿಗೆ ಸಂಬಂಧಿಸಿದಂತೆ ಪ್ರತಿ ತಿಂಗಳು ಕನಿಷ್ಠ 100 ದೂರುಗಳನ್ನು ಗ್ರಾಹಕರ ಆಯೋಗಕ್ಕೆ ದಾಖಲಿಸಬೇಕು. ಆಗ ಮಾತ್ರ ಈ ದಿನಾಚರಣೆ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಗೋಖಲೆ ಘಾಳಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಮಾರುಕಟ್ಟೆಯಲ್ಲಿ ಪ್ರತಿದಿನ ನೂರಾರು ಪ್ರಕರಣಗಳನ್ನು ದಾಖಲಿಸಬಹುದು. ಆದರೆ ಜನರಿಗೆ ಪ್ರಶ್ನೆ ಮಾಡುವ ಶಕ್ತಿ ಇಲ್ಲವಾಗಿದೆ. ವ್ಯಾಪಾರಿಗಳು ₹10, 20ಕ್ಕೆಲ್ಲ ಯಾರು ಬಿಲ್ಲು ಕೊಡುತ್ತಾರೆ ಎಂದು ಹೇಳುತ್ತಾರೆ.ಕಾನೂನು ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಗ್ರಾಹಕರು ಪ್ರಶ್ನೆ ಮಾಡುವುದನ್ನು ಕಲಿಯಬೇಕು’ ಎಂದು ಸಲಹೆ ನೀಡಿದರು.</p>.<p>ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ಜಿಲ್ಲೆಯಲ್ಲಿ ಪ್ರತಿ ವರ್ಷ 30 ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿ ಗ್ರಾಹಕರ ಕ್ಲಬ್ ಸ್ಥಾಪಿಸಿ, ಮಕ್ಕಳಲ್ಲೂ ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಈ ಬಾರಿ ‘ಟ್ಯಾಕಲ್ ಪ್ಲಾಸ್ಟಿಕ್ ಅಂಡ್ ಪೊಲ್ಯೂಷನ್’ ಎಂಬ ಘೋಷವಾಕ್ಯದಡಿ ಗ್ರಾಹಕರ ಹಕ್ಕುಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ’ ಎಂದರು.</p>.<p>ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಂಚಾಲಕ ಪಿ. ಅಂಜನಪ್ಪ ಉಪನ್ಯಾಸ ನೀಡಿದರು. ಆರ್.ಎಲ್. ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಸೋಮಶೇಖರಪ್ಪ, ಆಹಾರ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಟಿ. ಪ್ರಕಾಶ್ ಪ್ರಾರ್ಥಿಸಿದರು. ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕ ಎಚ್.ಎಸ್. ರಾಜು ವಂದಿಸಿದರು.</p>.<p><strong>‘ವೈದ್ಯರ ನಿರ್ಲಕ್ಷ್ಯಕ್ಕೂ ಪರಿಹಾರ’</strong></p>.<p>‘ಆಸ್ಪತ್ರೆಗಳಲ್ಲಿ ವೈದ್ಯರ ನಿರ್ಲಕ್ಷ್ಯ ವಹಿಸಿದರೂ ಗ್ರಾಹಕರ ಸಂರಕ್ಷಣಾ ಆಯೋಗದಲ್ಲಿ ಅಪೀಲು ದಾಖಲಿಸಿ ಪರಿಹಾರ ಪಡೆಯಬಹುದು’ ಎಂದುಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಜ್ಯೋತಿ ರಾಧೇಶ್ ಜಂಬಿಗಿ ಹೇಳಿದರು.</p>.<p>‘ಮುದ್ರಿತ ಅಥವಾ ನಿಗದಿತ ದರಕ್ಕಿಂತ ಹೆಚ್ಚಿನ ದರ ಪಡೆಯುವುದು, ವಸ್ತು ಅಥವಾ ಸೇವೆಯಲ್ಲಿನ ಕೊರತೆ, ನ್ಯೂನ್ಯತೆಯ ಬಗ್ಗೆ, ಗ್ರಾಹಕರಿಗೆ ನಕಲಿ ಸಂದೇಶ ಮತ್ತು ಜಾಹೀರಾತು ರವಾನೆ ಮಾಡಿದರೆ ಅಪೀಲು ದಾಖಲಿಸಿ ಪರಿಹಾರ ಪಡೆಯಬಹುದು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ದಾವಣಗೆರೆ ದೊಡ್ಡ ವ್ಯಾಪಾರ ಕೇಂದ್ರವಾದರೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ತಿಂಗಳಿಗೆ ಕೇವಲ 10 ದೂರುಗಳು ಬರುತ್ತಿರುವುದು ಕಾನೂನಿನ ಅರಿವಿನ ಕೊರತೆ ಇದೆ ಎಂಬುದನ್ನು ತಿಳಿಸುತ್ತದೆ’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ವಿಷಾದ ವ್ಯಕ್ತಪಡಿಸಿದರು.</p>.<p>ಜಿಲ್ಲಾಡಳಿತ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗಳ ಸಹಯೋಗದಲ್ಲಿ ನಗರದ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಮಂಗಳವಾರ ನಡೆದ ವಿಶ್ವ ಗ್ರಾಹಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘8 ಲಕ್ಷ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಒಂದು ವರ್ಷಕ್ಕೆ 120 ಪ್ರಕರಣಗಳು ಮಾತ್ರ ದಾಖಲಾಗುತ್ತಿವೆ. ಹಾಗಾದರೆ ಎಲ್ಲ ವ್ಯಾಪಾರ ವಹಿವಾಟುಗಳು ಕಾನೂನಿನ್ವಯ ಆಗುತ್ತಿವೆಯೇ ಅಥವಾ ಕಾನೂನಿನ ಅರಿವಿನ ಕೊರತೆಯಿಂದ ಗ್ರಾಹಕರು ಆಯೋಗಕ್ಕೆ ದೂರು ನೀಡುತ್ತಿಲ್ಲವೇ ಎಂಬ ಪ್ರಶ್ನೆ ಹಾಕಿಕೊಳ್ಳಬೇಕು’ ಎಂದರು.</p>.<p>‘ನಾವು ಕೊಳ್ಳುವ ಪ್ರತಿ ವಸ್ತುವಿಗೂ ರಶೀದಿ ಪಡೆದರೆ ಮಾತ್ರ ಗ್ರಾಹಕರ ಆಯೋಗಕ್ಕೆ ದೂರು ನೀಡಿ ನ್ಯಾಯ ಪಡೆಯಲು ಸಾಧ್ಯ.ಗ್ರಾಹಕರು ಖರೀದಿಸಿದ ಉತ್ಪನ್ನ ಅಥವಾ ಸೇವೆಗಳಿಗೆ ಸಂಬಂಧಿಸಿದಂತೆ ಪ್ರತಿ ತಿಂಗಳು ಕನಿಷ್ಠ 100 ದೂರುಗಳನ್ನು ಗ್ರಾಹಕರ ಆಯೋಗಕ್ಕೆ ದಾಖಲಿಸಬೇಕು. ಆಗ ಮಾತ್ರ ಈ ದಿನಾಚರಣೆ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಗೋಖಲೆ ಘಾಳಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಮಾರುಕಟ್ಟೆಯಲ್ಲಿ ಪ್ರತಿದಿನ ನೂರಾರು ಪ್ರಕರಣಗಳನ್ನು ದಾಖಲಿಸಬಹುದು. ಆದರೆ ಜನರಿಗೆ ಪ್ರಶ್ನೆ ಮಾಡುವ ಶಕ್ತಿ ಇಲ್ಲವಾಗಿದೆ. ವ್ಯಾಪಾರಿಗಳು ₹10, 20ಕ್ಕೆಲ್ಲ ಯಾರು ಬಿಲ್ಲು ಕೊಡುತ್ತಾರೆ ಎಂದು ಹೇಳುತ್ತಾರೆ.ಕಾನೂನು ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಗ್ರಾಹಕರು ಪ್ರಶ್ನೆ ಮಾಡುವುದನ್ನು ಕಲಿಯಬೇಕು’ ಎಂದು ಸಲಹೆ ನೀಡಿದರು.</p>.<p>ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ಜಿಲ್ಲೆಯಲ್ಲಿ ಪ್ರತಿ ವರ್ಷ 30 ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿ ಗ್ರಾಹಕರ ಕ್ಲಬ್ ಸ್ಥಾಪಿಸಿ, ಮಕ್ಕಳಲ್ಲೂ ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಈ ಬಾರಿ ‘ಟ್ಯಾಕಲ್ ಪ್ಲಾಸ್ಟಿಕ್ ಅಂಡ್ ಪೊಲ್ಯೂಷನ್’ ಎಂಬ ಘೋಷವಾಕ್ಯದಡಿ ಗ್ರಾಹಕರ ಹಕ್ಕುಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ’ ಎಂದರು.</p>.<p>ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಂಚಾಲಕ ಪಿ. ಅಂಜನಪ್ಪ ಉಪನ್ಯಾಸ ನೀಡಿದರು. ಆರ್.ಎಲ್. ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಸೋಮಶೇಖರಪ್ಪ, ಆಹಾರ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಟಿ. ಪ್ರಕಾಶ್ ಪ್ರಾರ್ಥಿಸಿದರು. ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕ ಎಚ್.ಎಸ್. ರಾಜು ವಂದಿಸಿದರು.</p>.<p><strong>‘ವೈದ್ಯರ ನಿರ್ಲಕ್ಷ್ಯಕ್ಕೂ ಪರಿಹಾರ’</strong></p>.<p>‘ಆಸ್ಪತ್ರೆಗಳಲ್ಲಿ ವೈದ್ಯರ ನಿರ್ಲಕ್ಷ್ಯ ವಹಿಸಿದರೂ ಗ್ರಾಹಕರ ಸಂರಕ್ಷಣಾ ಆಯೋಗದಲ್ಲಿ ಅಪೀಲು ದಾಖಲಿಸಿ ಪರಿಹಾರ ಪಡೆಯಬಹುದು’ ಎಂದುಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಜ್ಯೋತಿ ರಾಧೇಶ್ ಜಂಬಿಗಿ ಹೇಳಿದರು.</p>.<p>‘ಮುದ್ರಿತ ಅಥವಾ ನಿಗದಿತ ದರಕ್ಕಿಂತ ಹೆಚ್ಚಿನ ದರ ಪಡೆಯುವುದು, ವಸ್ತು ಅಥವಾ ಸೇವೆಯಲ್ಲಿನ ಕೊರತೆ, ನ್ಯೂನ್ಯತೆಯ ಬಗ್ಗೆ, ಗ್ರಾಹಕರಿಗೆ ನಕಲಿ ಸಂದೇಶ ಮತ್ತು ಜಾಹೀರಾತು ರವಾನೆ ಮಾಡಿದರೆ ಅಪೀಲು ದಾಖಲಿಸಿ ಪರಿಹಾರ ಪಡೆಯಬಹುದು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>