<p><strong>ತ್ಯಾವಣಿಗೆ</strong>: ರೈತರು ಬೆಳೆದಿರುವ ಭತ್ತಕ್ಕೆ ಸೂಕ್ತ ದರ ನೀಡಿ ಖರೀದಿಸುತ್ತಿಲ್ಲ ಎಂದು ಆರೋಪಿಸಿ, ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ವತಿಯಿಂದ ಕಾರಿಗನೂರು ಕ್ರಾಸ್ ಹಾಗೂ ಸೂಳೆಕೆರೆಯಲ್ಲಿ ಶನಿವಾರ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.</p>.<p>ಈಗಾಗಲೇ ಭತ್ತದ ಕಟಾವು ಅರ್ಧದಷ್ಟು ಮುಗಿದಿದ್ದು, ಖರೀದಿದಾರರು ರೈತರಿಂದ ಕ್ವಿಂಟಲ್ ಭತ್ತವನ್ನು ₹1,600 ರಿಂದ ₹1,900 ರವರೆಗೆ ಖರೀದಿ ಮಾಡುತ್ತಿದ್ದಾರೆ. ಈ ಸಮಯದಲ್ಲಿಯೇ ಮಳೆ ಸುರಿಯುತ್ತಿರುವುದರಿಂದ ರೈತರು ಆತಂಕದಲ್ಲಿ ಕಡಿಮೆ ದರಕ್ಕೇ ಮಾರಾಟ ಮಾಡುತ್ತಿದ್ದು, ನಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದರು.</p>.<p>ಎಕರೆ ಭತ್ತ ಬೆಳೆಯಲು ₹40,000ದಿಂದ ₹45,000 ಖರ್ಚಾಗುತ್ತದೆ. ಎಕರೆಗೆ 25 ಕ್ವಿಂಟಲ್ ಭತ್ತ ಬೆಳೆಯಬಹುದು. ಕಡಿಮೆ ದರಕ್ಕೆ ಮಾರಾಟ ಮಾಡುವುದರಿಂದ ರೈತರಿಗೆ ಎಕರೆಗೆ ₹6,000 ನಷ್ಟ ಆಗುತ್ತದೆ. ಕೇರಳ ಮಾದರಿಯಲ್ಲಿ ಸರ್ಕಾರ ಕ್ವಿಂಟಲ್ ಭತ್ತಕ್ಕೆ ₹1,200 ಪ್ರೋತ್ಸಹಧನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಮಾಡುತ್ತಿಲ್ಲ. ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಸುಗ್ರೀವಾಜ್ಞೆ ಮೂಲಕ ಕನಿಷ್ಠ ಬೆಂಬಲ ಬೆಲೆ ಜಾರಿಗೆ ತಂದು, ಕಡಿಮೆ ಬೆಲೆಗೆ ಖರೀದಿ ಮಾಡುವ ದಲ್ಲಾಳಿ ಹಾಗೂ ಕಂಪನಿಯವರನ್ನು ಕಾನೂನಿನಡಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾಧಿಕಾರಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಕರೆದು ಸಭೆ ನಡೆಸಬೇಕು. ಸಮಸ್ಯೆ ಬಗೆಹರಿಸದಿದ್ದರೆ ವಾರದೊಳಗೆ ಜಿಲ್ಲಾ ಬಂದ್ಗೆ ಕರೆ ನೀಡಲಾಗುವುದು ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಯಲ್ಲೋದಳ್ಳಿ ಎಸ್.ಆರ್. ರವಿಕುಮಾರ್ ಎಚ್ಚರಿಸಿದರು.</p>.<p>ಮುಖಂಡರಾದ ಭೀಮಾನಾಯ್ಕ, ರಾಜು, ಚಿರಂಜೀವಿ, ಅಸ್ತಪನಹಳ್ಳಿ ಗಂಡುಗಲಿ, ನಟರಾಜ, ಬಸವರಾಜ, ಮಹೇಶ್, ತಿಮ್ಮಣ್ಣ, ಪ್ರಕಾಶ್, ಕಲ್ಲೇಶ್, ತಿಪ್ಪೇಸ್ವಾಮಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ಯಾವಣಿಗೆ</strong>: ರೈತರು ಬೆಳೆದಿರುವ ಭತ್ತಕ್ಕೆ ಸೂಕ್ತ ದರ ನೀಡಿ ಖರೀದಿಸುತ್ತಿಲ್ಲ ಎಂದು ಆರೋಪಿಸಿ, ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ವತಿಯಿಂದ ಕಾರಿಗನೂರು ಕ್ರಾಸ್ ಹಾಗೂ ಸೂಳೆಕೆರೆಯಲ್ಲಿ ಶನಿವಾರ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.</p>.<p>ಈಗಾಗಲೇ ಭತ್ತದ ಕಟಾವು ಅರ್ಧದಷ್ಟು ಮುಗಿದಿದ್ದು, ಖರೀದಿದಾರರು ರೈತರಿಂದ ಕ್ವಿಂಟಲ್ ಭತ್ತವನ್ನು ₹1,600 ರಿಂದ ₹1,900 ರವರೆಗೆ ಖರೀದಿ ಮಾಡುತ್ತಿದ್ದಾರೆ. ಈ ಸಮಯದಲ್ಲಿಯೇ ಮಳೆ ಸುರಿಯುತ್ತಿರುವುದರಿಂದ ರೈತರು ಆತಂಕದಲ್ಲಿ ಕಡಿಮೆ ದರಕ್ಕೇ ಮಾರಾಟ ಮಾಡುತ್ತಿದ್ದು, ನಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದರು.</p>.<p>ಎಕರೆ ಭತ್ತ ಬೆಳೆಯಲು ₹40,000ದಿಂದ ₹45,000 ಖರ್ಚಾಗುತ್ತದೆ. ಎಕರೆಗೆ 25 ಕ್ವಿಂಟಲ್ ಭತ್ತ ಬೆಳೆಯಬಹುದು. ಕಡಿಮೆ ದರಕ್ಕೆ ಮಾರಾಟ ಮಾಡುವುದರಿಂದ ರೈತರಿಗೆ ಎಕರೆಗೆ ₹6,000 ನಷ್ಟ ಆಗುತ್ತದೆ. ಕೇರಳ ಮಾದರಿಯಲ್ಲಿ ಸರ್ಕಾರ ಕ್ವಿಂಟಲ್ ಭತ್ತಕ್ಕೆ ₹1,200 ಪ್ರೋತ್ಸಹಧನ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಮಾಡುತ್ತಿಲ್ಲ. ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಸುಗ್ರೀವಾಜ್ಞೆ ಮೂಲಕ ಕನಿಷ್ಠ ಬೆಂಬಲ ಬೆಲೆ ಜಾರಿಗೆ ತಂದು, ಕಡಿಮೆ ಬೆಲೆಗೆ ಖರೀದಿ ಮಾಡುವ ದಲ್ಲಾಳಿ ಹಾಗೂ ಕಂಪನಿಯವರನ್ನು ಕಾನೂನಿನಡಿ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾಧಿಕಾರಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಕರೆದು ಸಭೆ ನಡೆಸಬೇಕು. ಸಮಸ್ಯೆ ಬಗೆಹರಿಸದಿದ್ದರೆ ವಾರದೊಳಗೆ ಜಿಲ್ಲಾ ಬಂದ್ಗೆ ಕರೆ ನೀಡಲಾಗುವುದು ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಯಲ್ಲೋದಳ್ಳಿ ಎಸ್.ಆರ್. ರವಿಕುಮಾರ್ ಎಚ್ಚರಿಸಿದರು.</p>.<p>ಮುಖಂಡರಾದ ಭೀಮಾನಾಯ್ಕ, ರಾಜು, ಚಿರಂಜೀವಿ, ಅಸ್ತಪನಹಳ್ಳಿ ಗಂಡುಗಲಿ, ನಟರಾಜ, ಬಸವರಾಜ, ಮಹೇಶ್, ತಿಮ್ಮಣ್ಣ, ಪ್ರಕಾಶ್, ಕಲ್ಲೇಶ್, ತಿಪ್ಪೇಸ್ವಾಮಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>