<p><strong>ದಾವಣಗೆರೆ: </strong>ಆರ್ಥಿಕ, ಸಾಮಾಜಿಕ ಸಮಾನತೆಯ ಮೂಲಕ ಸಮಾಜದ ಸುಧಾರಣೆ ಸಾಧ್ಯ ಎಂಬುದನ್ನು ಪ್ರತಿಪಾದಿಸಿ, ಆ ತತ್ವಗಳ ಮೂಲಕ ದೇಶದ ಉನ್ನತಿಗೆ ಶ್ರಮಿಸಿದ ಮಹಾನ್ ನಾಯಕ ಡಾ. ಬಾಬೂ ಜಗಜೀವನರಾಂ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಭಿಪ್ರಾಯಪಟ್ಟರು.</p>.<p>ದಾವಣಗೆರೆ ವಿಶ್ವವಿದ್ಯಾನಿಲಯ, ಡಾ.ಬಾಬು ಜಗಜೀವನರಾಂ ಅಧ್ಯಯನ ಕೇಂದ್ರದಿಂದ ಸೋಮ<br />ವಾರ ಏರ್ಪಡಿಸಿದ್ದ ಬಾಬೂ ಜಗಜೀವನರಾಂ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು<br />ಮಾತನಾಡಿದರು.</p>.<p>ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಶಿವಾನಂದ ಕೆಳಗಿನಮನಿ, ಕುಲಸಚಿವೆ ಪ್ರೊ.ಗಾಯತ್ರಿ ದೇವರಾಜ ಮಾತನಾಡಿದರು.</p>.<p>ಬಾಬೂ ಜಗಜೀವನರಾಂ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಎಚ್. ವಿಶ್ವನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಿಂಡಿಕೇಟ್ ಸದಸ್ಯ ಇನಾಯತ್ಉಲ್ಲಾ ಟಿ ಮಾತನಾಡಿದರು. ಪರೀಕ್ಷಾಂಗ ಕುಲಸಚಿವೆ ಪ್ರೊ. ಅನಿತಾ ಎಚ್.ಎಸ್, ಹಣಕಾಸು ಅಧಿಕಾರಿ ಪ್ರಿಯಾಂಕ ಡಿ. ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಬಿ.ಎಸ್. ಪ್ರದೀಪ್ ಸ್ವಾಗತಿಸಿದರು. ಪ್ರೊ. ಗೋಪಿನಾಥ ವಂದಿಸಿದರು.<br />ಡಾ. ಭೀಮಾಶಂಕರ ಜೋಶಿ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಆರ್ಥಿಕ, ಸಾಮಾಜಿಕ ಸಮಾನತೆಯ ಮೂಲಕ ಸಮಾಜದ ಸುಧಾರಣೆ ಸಾಧ್ಯ ಎಂಬುದನ್ನು ಪ್ರತಿಪಾದಿಸಿ, ಆ ತತ್ವಗಳ ಮೂಲಕ ದೇಶದ ಉನ್ನತಿಗೆ ಶ್ರಮಿಸಿದ ಮಹಾನ್ ನಾಯಕ ಡಾ. ಬಾಬೂ ಜಗಜೀವನರಾಂ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಭಿಪ್ರಾಯಪಟ್ಟರು.</p>.<p>ದಾವಣಗೆರೆ ವಿಶ್ವವಿದ್ಯಾನಿಲಯ, ಡಾ.ಬಾಬು ಜಗಜೀವನರಾಂ ಅಧ್ಯಯನ ಕೇಂದ್ರದಿಂದ ಸೋಮ<br />ವಾರ ಏರ್ಪಡಿಸಿದ್ದ ಬಾಬೂ ಜಗಜೀವನರಾಂ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು<br />ಮಾತನಾಡಿದರು.</p>.<p>ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಶಿವಾನಂದ ಕೆಳಗಿನಮನಿ, ಕುಲಸಚಿವೆ ಪ್ರೊ.ಗಾಯತ್ರಿ ದೇವರಾಜ ಮಾತನಾಡಿದರು.</p>.<p>ಬಾಬೂ ಜಗಜೀವನರಾಂ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಎಚ್. ವಿಶ್ವನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಸಿಂಡಿಕೇಟ್ ಸದಸ್ಯ ಇನಾಯತ್ಉಲ್ಲಾ ಟಿ ಮಾತನಾಡಿದರು. ಪರೀಕ್ಷಾಂಗ ಕುಲಸಚಿವೆ ಪ್ರೊ. ಅನಿತಾ ಎಚ್.ಎಸ್, ಹಣಕಾಸು ಅಧಿಕಾರಿ ಪ್ರಿಯಾಂಕ ಡಿ. ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಬಿ.ಎಸ್. ಪ್ರದೀಪ್ ಸ್ವಾಗತಿಸಿದರು. ಪ್ರೊ. ಗೋಪಿನಾಥ ವಂದಿಸಿದರು.<br />ಡಾ. ಭೀಮಾಶಂಕರ ಜೋಶಿ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>