ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹೆಚ್ಚುವರಿ ನಿರ್ದೇಶಕ ಎಚ್.ಎಂ. ಶ್ರೀನಿವಾಸ್,‘ನೂತನ ಕೈಗಾರಿಕಾ ನೀತಿಯಲ್ಲಿ ₹ 5 ಲಕ್ಷ ಕೋಟಿ ಬಂಡವಾಳ ಹೂಡಿಕೆಯ ಆಕರ್ಷಣೆ, 20 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ರಾಜ್ಯವನ್ನು ದೇಶದಲ್ಲೇ 3ನೇ ಅತಿ ದೊಡ್ಡ ರಫ್ತು ರಾಜ್ಯ ಮಾಡುವುದು, ಶೇ 10ರ ಕೈಗಾರಿಕಾ ಬೆಳವಣಿಗೆ ಕಾಯ್ದುಕೊಳ್ಳುವುದರ ಜೊತೆಗೆ ತಂತ್ರಜ್ಞಾನ ಮತ್ತು ಅನ್ವೇಷಣೆಗೆ ಪೂರಕ ಪರಿಸರ ನಿರ್ಮಿಸುವ ಗುರಿ ಇದೆ’ ಎಂದು ವಿಶ್ಲೇಷಿಸಿದರು.