<p><strong>ದಾವಣಗೆರೆ</strong>: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಪೌರಕಾರ್ಮಿಕರು ಅಪೂರ್ವ ಸೇವೆ ಸಲ್ಲಿಸಿದ್ದಾರೆ. ಅವರ ಸಮಸ್ಯೆಗೆ ಪಾಲಿಕೆಯಿಂದ ಸಕಾರಾತ್ಮಕವಾಗಿ ಸ್ಪಂದಿಸಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ಮೇಯರ್ ಎಸ್.ಟಿ. ವೀರೇಶ್ ತಿಳಿಸಿದರು.</p>.<p>ನಗರದ ರಾಜನಹಳ್ಳಿ ಹನುಮಂತಪ್ಪ ಮಿನಿ ಕಲ್ಯಾಣ ಮಂಟಪದಲ್ಲಿ ಬುಧವಾರ ಬೆಂಗಳೂರಿನ ಕರ್ನಾಟಕ ನಾಟಕ ಅಕಾಡೆಮಿ, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಕೊರೊನಾ ಯೋಧರಾಗಿ ಸೇವೆ ಸಲ್ಲಿಸಿದ ಪೌರಕಾರ್ಮಿಕರಿಗೆ ನಮನ ಸಲ್ಲಿಸಲು ಏರ್ಪಡಿಸಿದ್ದ ‘ನೆಮ್ಮದಿ ಚಿಕಿತ್ಸಾ ರಂಗ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೊರೊನಾ ಸಂದರ್ಭದಲ್ಲಿ ಇಡೀ ದೇಶದ ಜನತೆಯು ಮನೆಯೊಳಗೆ ಇರಬೇಕಾದರೆ, ಮನೆಯಲ್ಲಿ ಮಕ್ಕಳು ಒಳಗೊಂಡಂತೆ ಕುಟುಂಬದ ಸದಸ್ಯರನ್ನು ಬಿಟ್ಟು, ಮನೆಯಿಂದ ಹೊರ ಬಂದು ಅಪೂರ್ವ ಸೇವೆ ಸಲ್ಲಿಸಿ, ಕೊರೊನಾ ಯೋಧರಾಗಿ ಕೆಲಸ ಮಾಡಿರುವುದು ಶ್ಲಾಘನೀಯ ಎಂದರು.</p>.<p>‘ಪೌರಕಾರ್ಮಿಕರು ಪ್ರತಿ ದಿನವೂ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಡೀ ಸಮಾಜ ಮತ್ತು ದೇಶವು ನಿಮ್ಮ ಜೊತೆಗಿದೆ. ನೀವು ಇನ್ನೂ ಅತ್ಯಂತ ಉತ್ಸಾಹದಿಂದ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಕಿವಿ, ಮೂಗು, ಗಂಟಲು ತಜ್ಞ ಡಾ.ಎ.ಎಂ.ಶಿವಕುಮಾರ್, ‘ಕೊರೊನಾ ಸಂದರ್ಭದಲ್ಲಿ ವೈದರಂತೆ, ಪೊಲೀಸರಂತೆ ಪೌರಕಾರ್ಮಿಕರೂ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಪೌರಕಾರ್ಮಿಕರು ಇಲ್ಲದಿದ್ದರೆ, ದೇಶದ ನೈರ್ಮಲ್ಯದ ಸ್ಥಿತಿ ಊಹಿಸಲು ಸಾಧ್ಯವಿಲ್ಲ’ ಎಂದರು.</p>.<p>ಪಾಲಿಕೆ ಆಯುಕ್ತ ವಿಶ್ವನಾಥಪಿ. ಮುದಜ್ಜಿ, ‘ವ್ಯಕ್ತಿಯ ಜನನದಿಂದ ಮರಣದ ಒಳಗಿನ ಅವಧಿಯಲ್ಲಿ ಎಲ್ಲ ರೀತಿಯ ಸೇವೆಯನ್ನು ಪಾಲಿಕೆ ನೀಡುತ್ತಿದೆ. ಅದರಲ್ಲೂ ಪೌರಕಾರ್ಮಿಕರ ಸೇವೆ ಅನನ್ಯ. ಕೊರೊನಾ ಸಂಪೂರ್ಣ ನಿರ್ಮೂಲನೆ ಆಗುವವರೆಗೂ ಎಲ್ಲರೂ ಅತ್ಯಂತ ಜಾಗೃತರಾಗಿರಬೇಕು’ ಎಂದು ಸಲಹೆ ನೀಡಿದರು.</p>.<p>ರಂಗ ನಿರ್ದೇಶಕ ಸಿದ್ದರಾಜು ಎಸ್.ಎಸ್ ಅವರ ನೇತೃತ್ವದ ಕಲಾ ತಂಡವು ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕರು ಸಲ್ಲಿಸಿದ ಸೇವೆಯನ್ನು ಸ್ಮರಿಸುವ ಕಿರು ನಾಟಕ ‘ಸಾಯೋ ಆಟ’ ಪ್ರದರ್ಶಿಸಲಾಯಿತು. ಪೌರಕಾರ್ಮಿಕರಿಗೆ ಅಭಿನಂದನಾ ಪತ್ರ ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಕಲಾವಿದ ಆರ್.ಟಿ. ಅರುಣಕುಮಾರ್, ನಾಟಕ ಅಕಾಡೆಮಿ ಸದಸ್ಯ ರವೀಂದ್ರ ಎಚ್. ಅರಳಗುಪ್ಪಿ, ರಂಗ ನಿರ್ದೇಶಕ ಸಿದ್ದರಾಜು ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಪೌರಕಾರ್ಮಿಕರು ಅಪೂರ್ವ ಸೇವೆ ಸಲ್ಲಿಸಿದ್ದಾರೆ. ಅವರ ಸಮಸ್ಯೆಗೆ ಪಾಲಿಕೆಯಿಂದ ಸಕಾರಾತ್ಮಕವಾಗಿ ಸ್ಪಂದಿಸಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ಮೇಯರ್ ಎಸ್.ಟಿ. ವೀರೇಶ್ ತಿಳಿಸಿದರು.</p>.<p>ನಗರದ ರಾಜನಹಳ್ಳಿ ಹನುಮಂತಪ್ಪ ಮಿನಿ ಕಲ್ಯಾಣ ಮಂಟಪದಲ್ಲಿ ಬುಧವಾರ ಬೆಂಗಳೂರಿನ ಕರ್ನಾಟಕ ನಾಟಕ ಅಕಾಡೆಮಿ, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಕೊರೊನಾ ಯೋಧರಾಗಿ ಸೇವೆ ಸಲ್ಲಿಸಿದ ಪೌರಕಾರ್ಮಿಕರಿಗೆ ನಮನ ಸಲ್ಲಿಸಲು ಏರ್ಪಡಿಸಿದ್ದ ‘ನೆಮ್ಮದಿ ಚಿಕಿತ್ಸಾ ರಂಗ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕೊರೊನಾ ಸಂದರ್ಭದಲ್ಲಿ ಇಡೀ ದೇಶದ ಜನತೆಯು ಮನೆಯೊಳಗೆ ಇರಬೇಕಾದರೆ, ಮನೆಯಲ್ಲಿ ಮಕ್ಕಳು ಒಳಗೊಂಡಂತೆ ಕುಟುಂಬದ ಸದಸ್ಯರನ್ನು ಬಿಟ್ಟು, ಮನೆಯಿಂದ ಹೊರ ಬಂದು ಅಪೂರ್ವ ಸೇವೆ ಸಲ್ಲಿಸಿ, ಕೊರೊನಾ ಯೋಧರಾಗಿ ಕೆಲಸ ಮಾಡಿರುವುದು ಶ್ಲಾಘನೀಯ ಎಂದರು.</p>.<p>‘ಪೌರಕಾರ್ಮಿಕರು ಪ್ರತಿ ದಿನವೂ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಡೀ ಸಮಾಜ ಮತ್ತು ದೇಶವು ನಿಮ್ಮ ಜೊತೆಗಿದೆ. ನೀವು ಇನ್ನೂ ಅತ್ಯಂತ ಉತ್ಸಾಹದಿಂದ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಕಿವಿ, ಮೂಗು, ಗಂಟಲು ತಜ್ಞ ಡಾ.ಎ.ಎಂ.ಶಿವಕುಮಾರ್, ‘ಕೊರೊನಾ ಸಂದರ್ಭದಲ್ಲಿ ವೈದರಂತೆ, ಪೊಲೀಸರಂತೆ ಪೌರಕಾರ್ಮಿಕರೂ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಪೌರಕಾರ್ಮಿಕರು ಇಲ್ಲದಿದ್ದರೆ, ದೇಶದ ನೈರ್ಮಲ್ಯದ ಸ್ಥಿತಿ ಊಹಿಸಲು ಸಾಧ್ಯವಿಲ್ಲ’ ಎಂದರು.</p>.<p>ಪಾಲಿಕೆ ಆಯುಕ್ತ ವಿಶ್ವನಾಥಪಿ. ಮುದಜ್ಜಿ, ‘ವ್ಯಕ್ತಿಯ ಜನನದಿಂದ ಮರಣದ ಒಳಗಿನ ಅವಧಿಯಲ್ಲಿ ಎಲ್ಲ ರೀತಿಯ ಸೇವೆಯನ್ನು ಪಾಲಿಕೆ ನೀಡುತ್ತಿದೆ. ಅದರಲ್ಲೂ ಪೌರಕಾರ್ಮಿಕರ ಸೇವೆ ಅನನ್ಯ. ಕೊರೊನಾ ಸಂಪೂರ್ಣ ನಿರ್ಮೂಲನೆ ಆಗುವವರೆಗೂ ಎಲ್ಲರೂ ಅತ್ಯಂತ ಜಾಗೃತರಾಗಿರಬೇಕು’ ಎಂದು ಸಲಹೆ ನೀಡಿದರು.</p>.<p>ರಂಗ ನಿರ್ದೇಶಕ ಸಿದ್ದರಾಜು ಎಸ್.ಎಸ್ ಅವರ ನೇತೃತ್ವದ ಕಲಾ ತಂಡವು ಕೋವಿಡ್ ಸಂದರ್ಭದಲ್ಲಿ ಪೌರಕಾರ್ಮಿಕರು ಸಲ್ಲಿಸಿದ ಸೇವೆಯನ್ನು ಸ್ಮರಿಸುವ ಕಿರು ನಾಟಕ ‘ಸಾಯೋ ಆಟ’ ಪ್ರದರ್ಶಿಸಲಾಯಿತು. ಪೌರಕಾರ್ಮಿಕರಿಗೆ ಅಭಿನಂದನಾ ಪತ್ರ ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಕಲಾವಿದ ಆರ್.ಟಿ. ಅರುಣಕುಮಾರ್, ನಾಟಕ ಅಕಾಡೆಮಿ ಸದಸ್ಯ ರವೀಂದ್ರ ಎಚ್. ಅರಳಗುಪ್ಪಿ, ರಂಗ ನಿರ್ದೇಶಕ ಸಿದ್ದರಾಜು ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>