<p><strong>ದಾವಣಗೆರೆ:</strong>ಈ ಹಿಂದೆ ವೈದ್ಯಕೀಯ ಎಂಬುದು ಸೇವೆಯ ಭಾಗವಾಗಿತ್ತು. ಆದರೆ ಇಂದು ಅದು ವ್ಯಾಪಾರೀಕರಣದ ವಿವಿಧ ಮುಖಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಷಾದನೀಯ ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕದಾದಾಪೀರ್ ನವಿಲೇಹಾಳ್ ತಿಳಿಸಿದರು.</p>.<p>ಜಿಲ್ಲೆ ಸಮಾಚಾರ ದಿನಪತ್ರಿಕೆ ಬಳಗದಿಂದ ನಗರದ ಸಿದ್ಧಗಂಗಾ ಶಾಲೆಯ ಆವರಣದಲ್ಲಿಪತ್ರಕರ್ತ ವಿ. ಹನುಮಂತಪ್ಪ ರಚಿಸಿರುವ ‘ನನ್ನ ಆರೋಗ್ಯ-ನನ್ನ ಸಂಪತ್ತು’ ಕೃತಿ ಕುರಿತು ಅವರು ಮಾತನಾಡಿದರು.</p>.<p>‘ಆರೋಗ್ಯವನ್ನು ಕಳೆದುಕೊಂಡರೆ ಎಲ್ಲವನ್ನು ಕಳೆದುಕೊಂಡಂತೆ. ವೈಯಕ್ತಿಕ ಆರೋಗ್ಯವು ದೇಶದ ಆರೋಗ್ಯವೂ ಹೌದು. ಕೇಂದ್ರ ಸರ್ಕಾರ ರಕ್ಷಣಾ ಕ್ಷೇತ್ರವನ್ನು ಹೊರತುಪಡಿಸಿದರೆ ಆರೋಗ್ಯ ಕ್ಷೇತ್ರಕ್ಕಾಗಿ ಹೆಚ್ಚಿನ ಬಜೆಟ್ ಅನ್ನು ತೆಗೆದಿರಿಸಿ ಆರೋಗ್ಯ ಸುಧಾರಣೆಯ ಯೋಜನೆಗಳನ್ನು ಜಾರಿಪಡಿಸುತ್ತಿದೆ’ ಎಂದರು.</p>.<p>‘ಆರೋಗ್ಯದ ಬಗೆಗಿನ ಕಾಳಜಿಯು ಪುರಾತನ ಗ್ರಂಥಗಳಲ್ಲಿ ಉಲ್ಲೇಖಿಸಲ್ಪಟ್ಟಿದ್ದು, ಅದು ಭಾರತೀಯ ಸಂಸ್ಕೃತಿಯ ಒಂದು ಭಾಗವೆನಿಸಿದೆ. ಸುಶ್ರುತ, ಧನ್ವಂತ್ರಿ, ಚರಕರಂತಹ ವಿದ್ವಾಂಸರ ಕೊಡುಗೆಯನ್ನು ಚರಿತ್ರೆಯಲ್ಲಿ ಸ್ಮರಿಸುವಂತಾಗಿದೆ’ ಎಂದರು.</p>.<p>ಪುಸ್ತಕ ಲೋಕಾರ್ಪಣೆಗೊಳಿಸಿದ ಲೇಖಕ ಎನ್.ಟಿ.ಯರ್ರಿಸ್ವಾಮಿ, ‘ಈಗ ಆರೋಗ್ಯದ ಬಗ್ಗೆ ಕಾಳಜಿ ಸಾರ್ವತ್ರಿಕವಾಗಿ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಪತ್ರಕರ್ತರಾದರೂ ಆರೋಗ್ಯದ ಜಾಗೃತಿಗೆ ಒತ್ತುಕೊಡುವ ಲೇಖನಗಳ ಸಂಗ್ರಹದ ಪುಸ್ತಕವನ್ನು ಪ್ರಕಟಿಸಿರುವ ಲೇಖಕರ ಶ್ರಮ ಶ್ಲಾಘನೀಯ’ ಎಂದರು.</p>.<p>ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ,ಬಳಗದ ಉಪಾಧ್ಯಕ್ಷ ಡಾ.ಈಶ್ವರ ಶರ್ಮ,ಪ್ರಧಾನ ಕಾರ್ಯದರ್ಶಿ ಸಿ.ಕೆ.ಆನಂದ ತೀರ್ಥಾಚಾರ್,ಗಿರಿಶೈಲ ಪ್ರಕಾಶನದ ಟಿ.ಎಸ್.ಶೈಲಜಾ ಇದ್ದರು. ಬಳಗದ ಸಂಚಾಲಕಸಾಲಿಗ್ರಾಮ ಗಣೇಶ ಶೆಣೈ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong>ಈ ಹಿಂದೆ ವೈದ್ಯಕೀಯ ಎಂಬುದು ಸೇವೆಯ ಭಾಗವಾಗಿತ್ತು. ಆದರೆ ಇಂದು ಅದು ವ್ಯಾಪಾರೀಕರಣದ ವಿವಿಧ ಮುಖಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಷಾದನೀಯ ಎಂದು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕದಾದಾಪೀರ್ ನವಿಲೇಹಾಳ್ ತಿಳಿಸಿದರು.</p>.<p>ಜಿಲ್ಲೆ ಸಮಾಚಾರ ದಿನಪತ್ರಿಕೆ ಬಳಗದಿಂದ ನಗರದ ಸಿದ್ಧಗಂಗಾ ಶಾಲೆಯ ಆವರಣದಲ್ಲಿಪತ್ರಕರ್ತ ವಿ. ಹನುಮಂತಪ್ಪ ರಚಿಸಿರುವ ‘ನನ್ನ ಆರೋಗ್ಯ-ನನ್ನ ಸಂಪತ್ತು’ ಕೃತಿ ಕುರಿತು ಅವರು ಮಾತನಾಡಿದರು.</p>.<p>‘ಆರೋಗ್ಯವನ್ನು ಕಳೆದುಕೊಂಡರೆ ಎಲ್ಲವನ್ನು ಕಳೆದುಕೊಂಡಂತೆ. ವೈಯಕ್ತಿಕ ಆರೋಗ್ಯವು ದೇಶದ ಆರೋಗ್ಯವೂ ಹೌದು. ಕೇಂದ್ರ ಸರ್ಕಾರ ರಕ್ಷಣಾ ಕ್ಷೇತ್ರವನ್ನು ಹೊರತುಪಡಿಸಿದರೆ ಆರೋಗ್ಯ ಕ್ಷೇತ್ರಕ್ಕಾಗಿ ಹೆಚ್ಚಿನ ಬಜೆಟ್ ಅನ್ನು ತೆಗೆದಿರಿಸಿ ಆರೋಗ್ಯ ಸುಧಾರಣೆಯ ಯೋಜನೆಗಳನ್ನು ಜಾರಿಪಡಿಸುತ್ತಿದೆ’ ಎಂದರು.</p>.<p>‘ಆರೋಗ್ಯದ ಬಗೆಗಿನ ಕಾಳಜಿಯು ಪುರಾತನ ಗ್ರಂಥಗಳಲ್ಲಿ ಉಲ್ಲೇಖಿಸಲ್ಪಟ್ಟಿದ್ದು, ಅದು ಭಾರತೀಯ ಸಂಸ್ಕೃತಿಯ ಒಂದು ಭಾಗವೆನಿಸಿದೆ. ಸುಶ್ರುತ, ಧನ್ವಂತ್ರಿ, ಚರಕರಂತಹ ವಿದ್ವಾಂಸರ ಕೊಡುಗೆಯನ್ನು ಚರಿತ್ರೆಯಲ್ಲಿ ಸ್ಮರಿಸುವಂತಾಗಿದೆ’ ಎಂದರು.</p>.<p>ಪುಸ್ತಕ ಲೋಕಾರ್ಪಣೆಗೊಳಿಸಿದ ಲೇಖಕ ಎನ್.ಟಿ.ಯರ್ರಿಸ್ವಾಮಿ, ‘ಈಗ ಆರೋಗ್ಯದ ಬಗ್ಗೆ ಕಾಳಜಿ ಸಾರ್ವತ್ರಿಕವಾಗಿ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಪತ್ರಕರ್ತರಾದರೂ ಆರೋಗ್ಯದ ಜಾಗೃತಿಗೆ ಒತ್ತುಕೊಡುವ ಲೇಖನಗಳ ಸಂಗ್ರಹದ ಪುಸ್ತಕವನ್ನು ಪ್ರಕಟಿಸಿರುವ ಲೇಖಕರ ಶ್ರಮ ಶ್ಲಾಘನೀಯ’ ಎಂದರು.</p>.<p>ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ,ಬಳಗದ ಉಪಾಧ್ಯಕ್ಷ ಡಾ.ಈಶ್ವರ ಶರ್ಮ,ಪ್ರಧಾನ ಕಾರ್ಯದರ್ಶಿ ಸಿ.ಕೆ.ಆನಂದ ತೀರ್ಥಾಚಾರ್,ಗಿರಿಶೈಲ ಪ್ರಕಾಶನದ ಟಿ.ಎಸ್.ಶೈಲಜಾ ಇದ್ದರು. ಬಳಗದ ಸಂಚಾಲಕಸಾಲಿಗ್ರಾಮ ಗಣೇಶ ಶೆಣೈ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>