ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಹೋರಾಟದಲ್ಲಿ ಪಂಚಮಸಾಲಿ ಸ್ವಾಮೀಜಿಗಳ ಸಂಗಮ

ಮೀಸಲಾತಿ ಪಾದಯಾತ್ರೆ ಸ್ವಾಗತ ಸಮಿತಿಯ ಗೌರವ ಅಧ್ಯಕ್ಷ ಎಚ್.ಎಸ್.ನಾಗರಾಜ್
Last Updated 23 ಜನವರಿ 2021, 13:52 IST
ಅಕ್ಷರ ಗಾತ್ರ

ದಾವಣಗೆರೆ:ಪಂಚಮಸಾಲಿ ಸಮಾಜಕ್ಕೆ ‘2ಎ’ ಮೀಸಲಾತಿಗೆ ಒತ್ತಾಯಿಸಿ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಸಮಾವೇಶಕ್ಕೆ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರನ್ನು ಆಹ್ವಾನಿಸಲು ಸ್ವಾಗತ ಸಮಿತಿ ನಿರ್ಧರಿಸಿದೆ.

‘ಕೂಡಲಸಂಗಮ ಪೀಠ ಹಾಗೂ ಹರಿಹರ ಪೀಠಗಳು ರಾಜ್ಯದ ಮಧ್ಯನಗರಿಯಲ್ಲಿ ಸಂಗಮವಾಗಬೇಕು ಎಂಬ ದೃಷ್ಟಿಯಿಂದ ಜ. 29ರಂದು ದಾವಣಗೆರೆಯಲ್ಲಿ ನಡೆಯುವ ಸಮಾವೇಶದಲ್ಲಿ ಎರಡೂ ಪೀಠಗಳ ಸ್ವಾಮೀಜಿಗಳನ್ನು ಕರೆತರಬೇಕು ಎಂದು ನಿರ್ಧರಿಸಿದ್ದೇವೆ. ಹರಿಹರದ ಪಂಚಮಸಾಲಿ ಪೀಠದ ಸಮಿತಿ ಸಮ್ಮತಿಸಿದೆ. ಭಾನುವಾರ ವಚನಾನಂದ ಸ್ವಾಮೀಜಿ ಅವರನ್ನು ಆಹ್ವಾನಿಸುತ್ತೇವೆ’ ಎಂದು ಪಾದಯಾತ್ರೆ ಸ್ವಾಗತಸಮಿತಿಯ ಗೌರವ ಅಧ್ಯಕ್ಷ ಎಚ್.ಎಸ್.ನಾಗರಾಜ್ ಶನಿವಾರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT