ನಗರದ ಕೆ.ಆರ್. ಮಾರುಕಟ್ಟೆ, ಗಡಿಯಾರ ಕಂಬ, ರಾಜನಹಳ್ಳಿ ಹನುಮಂತಪ್ಪ ಛತ್ರ, ಎಪಿಎಂಸಿ ತರಕಾರಿ ಮಾರುಕಟ್ಟೆ, ವಿಜಯಲಕ್ಷ್ಮಿ ರಸ್ತೆ, ಚಾಮರಾಜಪೇಟೆ, ಮಂಡಿ ಪೇಟೆ ಸೇರಿ ಹಲವೆಡೆ ತೆರೆದಿದ್ದ ದಿನಸಿ, ತರಕಾರಿ ಅಂಗಡಿಗಳ ಸಮೀಪ ಎಂದಿಗಿಂತಲೂ ಹೆಚ್ಚಿನ ಜನದಟ್ಟಣೆ ಕಂಡುಬಂತು. ಮಾಂಸದ ಅಂಗಡಿಗಳಲ್ಲಿಯೂ ಬೇಡಿಕೆ ಹೆಚ್ಚಿತ್ತು. ಮದ್ಯದಂಗಡಿಗಳಲ್ಲಿ ಪಾರ್ಸೆಲ್ಗಾಗಿ ಜನರು ಸರದಿಯಲ್ಲಿ ನಿಂತಿದ್ದರು. ಮಧ್ಯಾಹ್ನ 12 ದಾಟಿದರೂ ಎಲ್ಲ ಕಡೆ ಜನರು ಇರುವುದನ್ನು ಕಂಡು ಪೊಲೀಸರು ಒತ್ತಾಯಪೂರ್ವಕವಾಗಿ ಅಂಗಡಿಗಳಿಗೆ ಬಾಗಿಲು ಹಾಕಿಸಿದರು.