‘ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಮರದಲ್ಲಿದ್ದ ಜೇನು ನೊಣಗಳು ಕರಿಯಪ್ಪ ಅವರಿಗೆ ಕಚ್ಚಿವೆ.ತಕ್ಷಣ ತೋಟದ ಮಾಲೀಕರಿಗೆ ಕರೆ ಮಾಡಿ ತಿಳಿಸಿ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ಸೇರಿಸಿದೆವು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ’ ಎಂದು ಕರಿಯಪ್ಪ ಸಹೋದರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.