ದಾವಣಗೆರೆ: ಮೂತ್ರ ವಿಸರ್ಜನೆಗೆಂದು ಹೋದ ಸಂದರ್ಭದಲ್ಲಿ ವಿದ್ಯುತ್ ಶಾಕ್ ಹೊಡೆದು ಯುವಕ ಭಾನುವಾರ ಮೃತಪಟ್ಟಿದ್ದಾರೆ.
ಭಾರತ್ ಕಾಲೊನಿಯ ಮನೋಜ್ ಮಜ್ಜಿಗೆ (21) ಮೃತಪಟ್ಟವರು. ತುಂತುರು ಮಳೆ ಬರುತ್ತಿದ್ದಾಗ ಯಲ್ಲಮ್ಮನಗರ ಕುಂದವಾಡ ರಸ್ತೆಯಲ್ಲಿ ವಿದ್ಯುತ್ ಕಂಬದಿಂದ ವಿದ್ಯುತ್ ಗ್ರೌಂಡ್ ಆಗಿದ್ದರಿಂದ ಈ ದುರ್ಘಟನೆ ಉಂಟಾಗಿದೆ. ಪೊಲೀಸರು ಕೂಡಲೇ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದರು.
ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನು ಇಡಲಾಗಿದೆ. ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.