ಆವರಗೆರೆಯ ವೀರಭದ್ರಪ್ಪ (55) ಮೃತಪಟ್ಟವರು. ಬಸ್ ನಿಲ್ದಾಣದ ಬಳಿ ಪಿಬಿ ರಸ್ತೆಯಲ್ಲಿ ಮೊಟಾರ್ ಸೈಕಲ್ನಲ್ಲಿ ಹೋಗುತ್ತಿದ್ದಾಗ ನಾಯಿ ಅಡ್ಡ ಬಂದಿದೆ. ಇದನ್ನು ತಪ್ಪಿಸಲು ಬ್ರೇಕ್ ಹಾಕಿದಾಗ ಕೆಳಗೆ ಬಿದ್ದು, ತಲೆಗೆ ತೀವ್ರ ಪೆಟ್ಟಾಗಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ದಾವಣಗೆರೆ ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.