<p>ದಾವಣಗೆರೆ: ‘ಸದಾಶಿವ ಆಯೋಗ ವರದಿ ಜಾರಿಗಾಗಿ ಆಗ್ರಹಿಸಿ ಉದ್ದೇಶಿತ ಪಾದಯಾತ್ರೆಯನ್ನು ಸ್ವಲ್ಪ ದಿನಗಳ ಮಟ್ಟಿಗೆ ಮುಂದೂಡಲಾಗುವುದು. ಆದರೆ, ಯಾವುದೇ ಕಾರಣಕ್ಕೂ ಹೋರಾಟ ನಿಲ್ಲುವುದಿಲ್ಲ’ ಎಂದು ಆದಿಜಾಂಬವ ಪೀಠದ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.</p>.<p>ಪಾದಯಾತ್ರೆ ಸಂಬಂಧ ಚರ್ಚಿಸಲು ಇಲ್ಲಿನ ಎಸ್.ಜೆ.ಎಂ. ನಗರದ ಬಾಬೂ ಜಗಜೀವನರಾಂ ಸಮುದಾಯ ಭವನ<br />ದಲ್ಲಿಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮುಖಂಡರು ‘ಸಿದ್ಧತೆಗೆ ಕಾಲಾವಕಾಶ ಕಡಿಮೆ ಇದೆ. ಹಿರಿಯ ರಾಜಕಾರಣಿಗಳನ್ನು ಒಗ್ಗೂಡಿಸಿಕೊಳ್ಳಬೇಕಿದೆ’ ಎಂಬ ಅಭಿಪ್ರಾಯ ಹೇಳಿದಾಗ ಸ್ವಾಮೀಜಿ ಸಹಮತಿಸಿದರು.</p>.<p>‘ರಾಜ್ಯದಲ್ಲಿ ಮತ್ತೊಂದು ಸುತ್ತು ಪ್ರವಾಸ ಕೈಗೊಂಡು ಹಿರಿಯ ರಾಜಕಾರಣಿಗಳು, ಜನಪ್ರತಿನಿಧಿಗಳು, ನೌಕರರು, ದಲಿತ ಸಂಘಟನೆಗಳೊಂದಿಗೆ ಸಭೆ ನಡೆಸಿ ಅಂತಿಮ ದಿನಾಂಕ ನಿರ್ಧರಿಸಲಾಗುವುದು’ ಎಂದರು.</p>.<p>‘ಪಾದಯಾತ್ರೆಗೆ ಸಮುದಾಯದ ಎಲ್ಲ ಮಠಾಧೀಶರ ಬೆಂಬಲವಿದೆ. ಮಾದಾರ ಚನ್ನಯ್ಯ ಸ್ವಾಮೀಜಿಗಳೇ ಹೋರಾಟಕ್ಕೆ ಪ್ರೇರಣೆ. ಈ ಬಗ್ಗೆ ಭಕ್ತರಲ್ಲಿ ಗೊಂದಲ ಬೇಡ. ಮುಖಂಡರು ಜಿಲ್ಲಾವಾರು ಸಮಿತಿ ರಚಿಸಿ ಹೋರಾಟದ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದರು.</p>.<p>ಶಾಸಕ ಪ್ರೊ.ಎನ್.ಲಿಂಗಣ್ಣ, ‘ನಾನು ಮಾದಿಗ ಸಮಾಜದವನಾಗಿದ್ದು, ಪಾದಯಾತ್ರೆಯಲ್ಲಿ ಭಾಗಿಯಾಗುತ್ತೇನೆ. ಅಗತ್ಯ ಧನಸಹಾಯ ನೀಡುತ್ತೇನೆ’ ಎಂದು ಹೇಳಿದರು.</p>.<p>ಹಾವೇರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪರಮೇಶ್ವರಪ್ಪ ಮೇಲ್ಮನೆ, ಎಂ. ಹಾಲೇಶ್ ಆಕ್ಷೇಪಿಸಿದರು.ಆಲೂರು ನಿಂಗರಾಜ್, ಎಚ್.ಸಿ. ಗುಡ್ಡಪ್ಪ, ಡಿ. ದುರುಗೇಶ್, ಎಸ್.ಮಲ್ಲಿಕಾರ್ಜುನ್, ಕುಂದವಾಡ ಮಂಜುನಾಥ್, ಕೆಟಿಜೆ ನಗರ ರವಿ, ಸೋಮ್ಲಾಪುರ ಹನುಮಂತಪ್ಪ, ಡಿ. ದುಗ್ಗಪ್ಪ, ನಾಗರಾಜ್, ಈಶ್ವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಸದಾಶಿವ ಆಯೋಗ ವರದಿ ಜಾರಿಗಾಗಿ ಆಗ್ರಹಿಸಿ ಉದ್ದೇಶಿತ ಪಾದಯಾತ್ರೆಯನ್ನು ಸ್ವಲ್ಪ ದಿನಗಳ ಮಟ್ಟಿಗೆ ಮುಂದೂಡಲಾಗುವುದು. ಆದರೆ, ಯಾವುದೇ ಕಾರಣಕ್ಕೂ ಹೋರಾಟ ನಿಲ್ಲುವುದಿಲ್ಲ’ ಎಂದು ಆದಿಜಾಂಬವ ಪೀಠದ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.</p>.<p>ಪಾದಯಾತ್ರೆ ಸಂಬಂಧ ಚರ್ಚಿಸಲು ಇಲ್ಲಿನ ಎಸ್.ಜೆ.ಎಂ. ನಗರದ ಬಾಬೂ ಜಗಜೀವನರಾಂ ಸಮುದಾಯ ಭವನ<br />ದಲ್ಲಿಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮುಖಂಡರು ‘ಸಿದ್ಧತೆಗೆ ಕಾಲಾವಕಾಶ ಕಡಿಮೆ ಇದೆ. ಹಿರಿಯ ರಾಜಕಾರಣಿಗಳನ್ನು ಒಗ್ಗೂಡಿಸಿಕೊಳ್ಳಬೇಕಿದೆ’ ಎಂಬ ಅಭಿಪ್ರಾಯ ಹೇಳಿದಾಗ ಸ್ವಾಮೀಜಿ ಸಹಮತಿಸಿದರು.</p>.<p>‘ರಾಜ್ಯದಲ್ಲಿ ಮತ್ತೊಂದು ಸುತ್ತು ಪ್ರವಾಸ ಕೈಗೊಂಡು ಹಿರಿಯ ರಾಜಕಾರಣಿಗಳು, ಜನಪ್ರತಿನಿಧಿಗಳು, ನೌಕರರು, ದಲಿತ ಸಂಘಟನೆಗಳೊಂದಿಗೆ ಸಭೆ ನಡೆಸಿ ಅಂತಿಮ ದಿನಾಂಕ ನಿರ್ಧರಿಸಲಾಗುವುದು’ ಎಂದರು.</p>.<p>‘ಪಾದಯಾತ್ರೆಗೆ ಸಮುದಾಯದ ಎಲ್ಲ ಮಠಾಧೀಶರ ಬೆಂಬಲವಿದೆ. ಮಾದಾರ ಚನ್ನಯ್ಯ ಸ್ವಾಮೀಜಿಗಳೇ ಹೋರಾಟಕ್ಕೆ ಪ್ರೇರಣೆ. ಈ ಬಗ್ಗೆ ಭಕ್ತರಲ್ಲಿ ಗೊಂದಲ ಬೇಡ. ಮುಖಂಡರು ಜಿಲ್ಲಾವಾರು ಸಮಿತಿ ರಚಿಸಿ ಹೋರಾಟದ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದರು.</p>.<p>ಶಾಸಕ ಪ್ರೊ.ಎನ್.ಲಿಂಗಣ್ಣ, ‘ನಾನು ಮಾದಿಗ ಸಮಾಜದವನಾಗಿದ್ದು, ಪಾದಯಾತ್ರೆಯಲ್ಲಿ ಭಾಗಿಯಾಗುತ್ತೇನೆ. ಅಗತ್ಯ ಧನಸಹಾಯ ನೀಡುತ್ತೇನೆ’ ಎಂದು ಹೇಳಿದರು.</p>.<p>ಹಾವೇರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪರಮೇಶ್ವರಪ್ಪ ಮೇಲ್ಮನೆ, ಎಂ. ಹಾಲೇಶ್ ಆಕ್ಷೇಪಿಸಿದರು.ಆಲೂರು ನಿಂಗರಾಜ್, ಎಚ್.ಸಿ. ಗುಡ್ಡಪ್ಪ, ಡಿ. ದುರುಗೇಶ್, ಎಸ್.ಮಲ್ಲಿಕಾರ್ಜುನ್, ಕುಂದವಾಡ ಮಂಜುನಾಥ್, ಕೆಟಿಜೆ ನಗರ ರವಿ, ಸೋಮ್ಲಾಪುರ ಹನುಮಂತಪ್ಪ, ಡಿ. ದುಗ್ಗಪ್ಪ, ನಾಗರಾಜ್, ಈಶ್ವರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>