ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಕಾರ್ಯಕ್ರಮದ ಬಳಿಕ ಮೈದಾನ ಸ್ವಚ್ಛ

Published 30 ಏಪ್ರಿಲ್ 2024, 6:34 IST
Last Updated 30 ಏಪ್ರಿಲ್ 2024, 6:34 IST
ಅಕ್ಷರ ಗಾತ್ರ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರಾಂದೋಲನ ಸಭೆ ನಡೆದ ಹೈಸ್ಕೂಲ್ ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹಾಗೂ ಮುಖಂಡರು ಶ್ರಮದಾನ ಮಾಡಿ ಸ್ವಚ್ಛಗೊಳಿಸಿದರು.

ಬಿಜೆಪಿ ಮುಖಂಡರು, ಮಹಾನಗರ ಪಾಲಿಕೆ ಸದಸ್ಯರು, ಕಾರ್ಯಕರ್ತರ ಜೊತೆಯಲ್ಲಿ ಕಸ ಗುಡಿಸಿ, ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಬಳಿಕ ಮಾತನಾಡಿದ ಅವರು ಇಲ್ಲಿ ನಮ್ಮ ಕಾರ್ಯಕ್ರಮ ಆಗಿದ್ದು, ಇದನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ನರೇಂದ್ರ ಮೋದಿ ಅವರು ನಮಗೆಲ್ಲ ಸ್ವಚ್ಛ ಭಾರತ್ ಬಗ್ಗೆ ಪಾಠ ಮಾಡಿದ್ದಾರೆ’ ಎಂದು ಹೇಳಿದರು.

‘ನರೇಂದ್ರ ಮೋದಿ ಅವರ ಅವರ ಕಾರ್ಯಕ್ರಮದಿಂದ ನನಗೆ ಮತ್ತು ನಮ್ಮ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಸಿಕ್ಕಿದಂತಾಗಿದೆ. ನನ್ನ ಪರವಾಗಿ ಮತಯಾಚಿಸಿರುವುದು ನನ್ನ ಗೆಲುವಿಗೆ ಶ್ರೀರಕ್ಷೆ. ಚುನಾವಣೆಗೆ 6 ದಿವಸ ಬಾಕಿ ಇದ್ದು, ಅಷ್ಟರೊಳಗೆ ವಾನರ ಸೇನೆಯಂತೆ ಕೆಲಸ ಮಾಡೋಣ’ ಎಂದು ಕರೆ ನೀಡಿದರು.

‘ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಇಡೀ ಹೈಸ್ಕೂಲ್ ಮೈದಾನ ತುಂಬಿ ಜನ ಹೊರಗೆ ನಿಂತು ಕಾರ್ಯಕ್ರಮ ವೀಕ್ಷಿಸಿದ್ದಾರೆ. ಕಾರ್ಯಕ್ರಮಕ್ಕೆ ಬಂದಿದ್ದ ಜನಸ್ತೋಮ ನೋಡಿದರೆ ನಾನು ಗೆಲ್ಲುತ್ತೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಧೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್, ಬಿಜೆಪಿ ಮುಖಂಡರಾದ ಜಿ.ಎಸ್. ಅನಿತ್ ಕುಮಾರ್, ಜಿ.ಎಸ್.ಅಶ್ವಿನಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ  ಬಿ‌.ಎಸ್. ಜಗದೀಶ್,  ಪಾಲಿಕೆಯ ವಿರೋಧ ಪಕ್ಷದ ನಾಯಕ ಪ್ರಸನ್ನ ಕುಮಾರ್, ಮಾಜಿ ಮೇಯರ್ ಎಸ್.ಟಿ. ವೀರೇಶ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT