<p><strong>ದಾವಣಗೆರೆ: </strong>ಕೌಟುಂಬಿಕ ಕಲಹದ ಕಾರಣದಿಂದ ಪತ್ನಿಯ ದೂರು ನೀಡಿದ್ದರಿಂದ ವಿಚಾರಣೆಗಾಗಿ ಠಾಣೆಗೆ ಕರೆತಂದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಪೊಲೀಸರ ಹಲ್ಲೆಯಿಂದ ಮೃತಪಟ್ಟಿದ್ದಾರೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದಾರೆ.</p>.<p>ಮಾಯಕೊಂಡ ಸಮೀಪದ ವಿಠ್ಠಲಾಪುರ ಗ್ರಾಮದ ಮರುಳಸಿದ್ದಪ್ಪ (46) ಮೃತಪಟ್ಟವರು. ಇವರ ಶವ ಠಾಣೆಗೆ 100 ಮೀಟರ್ ದೂರದಲ್ಲಿ ರೈಲ್ವೆ ಗೇಟಿನ ಬಳಿ ಇರುವ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ.</p>.<p>ಮರುಳಸಿದ್ದಪ್ಪ ಅವರಿಗೆ ಮದುವೆಯಾಗಿದ್ದು, ಇಬ್ಬರು ಪುತ್ರಿಯರು ಇದ್ದಾರೆ. ಬೇರೆ ಯುವತಿಯೊಂದಿಗೆ ನಾಪತ್ತೆಯಾಗಿದ್ದ ಎನ್ನಲಾಗಿದ್ದು, ಈ ಸಂಬಂಧ ಪತ್ನಿ ವೃಂದಮ್ಮ ಮಾಯಕೊಂಡ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಮಾಯಕೊಂಡ ಠಾಣೆಯ ಪೊಲೀಸರು ಸಮೀಪದ ಹುಚ್ಚವ್ವನಹಳ್ಳಿಯಲ್ಲಿ ಇದ್ದ ಈತನನ್ನು ಸೋಮವಾರ ಕರೆತಂದು ಠಾಣೆಯಲ್ಲಿ ಇರಿಸಿದ್ದರು.</p>.<p>ಠಾಣೆಯಲ್ಲೇ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಪೊಲೀಸರು ರಾತ್ರಿ ವೇಳೆ ಕರೆ ಮಾಡಿ ಮರುಳಸಿದ್ದಪ್ಪ ಅವರ ಕುಟುಂಬದವರಿಗೆ ಹೇಳಿದ್ದರು. ಆದರೆ ಕುಟುಂಬದವರು ಬೆಳಿಗ್ಗೆ ಬರುವುದಾಗಿ ಹೇಳಿದ್ದರು. ಮಧ್ಯಾಹ್ನ 12 ಗಂಟೆಯ ವೇಳೆಗೆ ಮರುಳಸಿದ್ದಪ್ಪ ಅವರ ಶವ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾಗಿದೆ.</p>.<p>‘ರಾತ್ರಿ ವೇಳೆ ಠಾಣೆಯಲ್ಲೇ ಇದ್ದು, ಎದೆನೋವು ಕಾಣಿಸಿಕೊಂಡಿತು ಎಂದಿದ್ದರು. ಹೀಗಾಗಿ ಹೊರಗೆ ಬಿಟ್ಟೆವು. ಹೃದಯಾಘಾತದಿಂದ ಸತ್ತಿದ್ದಾರೆ‘ ಎಂಬುದು ಪೊಲೀಸರ ಹೇಳಿಕೆ.</p>.<p>‘ರಾತ್ರಿ ವೇಳೆ ನಮ್ಮ ಅಣ್ಣ ಊಟ ಮಾಡಿ ಚೆನ್ನಾಗಿಯೇ ಇದ್ದ. ಪೊಲೀಸರೇ ನನ್ನ ಅಣ್ಣನನ್ನು ಹೊಡೆದು ಹಾಕಿ ಶವವನ್ನು ಎಸೆದು ಹೋಗಿದ್ದಾರೆ‘ ಎಂದು ಮೃತನ ಸಹೋದರ ರುದ್ರೇಶಿ ಆರೋಪಿಸಿದ್ದಾರೆ.</p>.<p class="Briefhead">ಮೂವರ ಅಮಾನತು</p>.<p>ಘಟನೆಗೆ ಸಂಬಂಧಿಸಿದಂತೆ ಮಾಯಕೊಂಡ ಠಾಣೆಯ ಪಿಎಸ್ಐ ಪ್ರಕಾಶ್, ಹೆಡ್ ಕಾನ್ಸ್ಟೆಬಲ್ ನಾಗರಾಜ್ ಮತ್ತು ಪೊಲೀಸ್ ಕಾನ್ಸ್ಟೆಬಲ್ ಶೇರ್ ಅಲಿ ಅವರನ್ನು ಅಮಾನತುಗೊಳಿಸಲಾಗಿದೆ.</p>.<p>‘ಪೊಲೀಸ್ ಕಸ್ಟಡಿಯಲ್ಲೇ ಸಾವು ಸಂಭವಿಸಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಸೇರಿ ಮೂವರನ್ನು ಅಮಾನತು ಮಾಡಲಾಗಿದ್ದು, ಇವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.</p>.<p><br />ಮೃತನ ಕುಟುಂಬಕ್ಕೆ ನ್ಯಾಯ ಒದಗಿಸುತ್ತೇವೆ. ಸಮಾಜ ಕಲ್ಯಾಣ ಇಲಾಖೆಯಿಂದ ಪರಿಹಾರ ಕೊಡಿಸುತ್ತೇವೆ. ಸಿಐಡಿ ತನಿಖೆ ನಡೆಸಲಾಗುವುದು.</p>.<p>– ಎಸ್.ರವಿ, ಐಜಿಪಿ, ಪೂರ್ವವಲಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಕೌಟುಂಬಿಕ ಕಲಹದ ಕಾರಣದಿಂದ ಪತ್ನಿಯ ದೂರು ನೀಡಿದ್ದರಿಂದ ವಿಚಾರಣೆಗಾಗಿ ಠಾಣೆಗೆ ಕರೆತಂದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಪೊಲೀಸರ ಹಲ್ಲೆಯಿಂದ ಮೃತಪಟ್ಟಿದ್ದಾರೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದಾರೆ.</p>.<p>ಮಾಯಕೊಂಡ ಸಮೀಪದ ವಿಠ್ಠಲಾಪುರ ಗ್ರಾಮದ ಮರುಳಸಿದ್ದಪ್ಪ (46) ಮೃತಪಟ್ಟವರು. ಇವರ ಶವ ಠಾಣೆಗೆ 100 ಮೀಟರ್ ದೂರದಲ್ಲಿ ರೈಲ್ವೆ ಗೇಟಿನ ಬಳಿ ಇರುವ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ.</p>.<p>ಮರುಳಸಿದ್ದಪ್ಪ ಅವರಿಗೆ ಮದುವೆಯಾಗಿದ್ದು, ಇಬ್ಬರು ಪುತ್ರಿಯರು ಇದ್ದಾರೆ. ಬೇರೆ ಯುವತಿಯೊಂದಿಗೆ ನಾಪತ್ತೆಯಾಗಿದ್ದ ಎನ್ನಲಾಗಿದ್ದು, ಈ ಸಂಬಂಧ ಪತ್ನಿ ವೃಂದಮ್ಮ ಮಾಯಕೊಂಡ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಮಾಯಕೊಂಡ ಠಾಣೆಯ ಪೊಲೀಸರು ಸಮೀಪದ ಹುಚ್ಚವ್ವನಹಳ್ಳಿಯಲ್ಲಿ ಇದ್ದ ಈತನನ್ನು ಸೋಮವಾರ ಕರೆತಂದು ಠಾಣೆಯಲ್ಲಿ ಇರಿಸಿದ್ದರು.</p>.<p>ಠಾಣೆಯಲ್ಲೇ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಪೊಲೀಸರು ರಾತ್ರಿ ವೇಳೆ ಕರೆ ಮಾಡಿ ಮರುಳಸಿದ್ದಪ್ಪ ಅವರ ಕುಟುಂಬದವರಿಗೆ ಹೇಳಿದ್ದರು. ಆದರೆ ಕುಟುಂಬದವರು ಬೆಳಿಗ್ಗೆ ಬರುವುದಾಗಿ ಹೇಳಿದ್ದರು. ಮಧ್ಯಾಹ್ನ 12 ಗಂಟೆಯ ವೇಳೆಗೆ ಮರುಳಸಿದ್ದಪ್ಪ ಅವರ ಶವ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾಗಿದೆ.</p>.<p>‘ರಾತ್ರಿ ವೇಳೆ ಠಾಣೆಯಲ್ಲೇ ಇದ್ದು, ಎದೆನೋವು ಕಾಣಿಸಿಕೊಂಡಿತು ಎಂದಿದ್ದರು. ಹೀಗಾಗಿ ಹೊರಗೆ ಬಿಟ್ಟೆವು. ಹೃದಯಾಘಾತದಿಂದ ಸತ್ತಿದ್ದಾರೆ‘ ಎಂಬುದು ಪೊಲೀಸರ ಹೇಳಿಕೆ.</p>.<p>‘ರಾತ್ರಿ ವೇಳೆ ನಮ್ಮ ಅಣ್ಣ ಊಟ ಮಾಡಿ ಚೆನ್ನಾಗಿಯೇ ಇದ್ದ. ಪೊಲೀಸರೇ ನನ್ನ ಅಣ್ಣನನ್ನು ಹೊಡೆದು ಹಾಕಿ ಶವವನ್ನು ಎಸೆದು ಹೋಗಿದ್ದಾರೆ‘ ಎಂದು ಮೃತನ ಸಹೋದರ ರುದ್ರೇಶಿ ಆರೋಪಿಸಿದ್ದಾರೆ.</p>.<p class="Briefhead">ಮೂವರ ಅಮಾನತು</p>.<p>ಘಟನೆಗೆ ಸಂಬಂಧಿಸಿದಂತೆ ಮಾಯಕೊಂಡ ಠಾಣೆಯ ಪಿಎಸ್ಐ ಪ್ರಕಾಶ್, ಹೆಡ್ ಕಾನ್ಸ್ಟೆಬಲ್ ನಾಗರಾಜ್ ಮತ್ತು ಪೊಲೀಸ್ ಕಾನ್ಸ್ಟೆಬಲ್ ಶೇರ್ ಅಲಿ ಅವರನ್ನು ಅಮಾನತುಗೊಳಿಸಲಾಗಿದೆ.</p>.<p>‘ಪೊಲೀಸ್ ಕಸ್ಟಡಿಯಲ್ಲೇ ಸಾವು ಸಂಭವಿಸಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಸೇರಿ ಮೂವರನ್ನು ಅಮಾನತು ಮಾಡಲಾಗಿದ್ದು, ಇವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.</p>.<p><br />ಮೃತನ ಕುಟುಂಬಕ್ಕೆ ನ್ಯಾಯ ಒದಗಿಸುತ್ತೇವೆ. ಸಮಾಜ ಕಲ್ಯಾಣ ಇಲಾಖೆಯಿಂದ ಪರಿಹಾರ ಕೊಡಿಸುತ್ತೇವೆ. ಸಿಐಡಿ ತನಿಖೆ ನಡೆಸಲಾಗುವುದು.</p>.<p>– ಎಸ್.ರವಿ, ಐಜಿಪಿ, ಪೂರ್ವವಲಯ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>