ದಾವಣಗೆರೆ: ಬಿಜೆಪಿಯಲ್ಲಿ ನಾನು ಮೊದಲ ಬಾರಿಗೆ ಶಾಸಕನಾಗಿದ್ದು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಕುಡಚಿ ಕ್ಷೇತ್ರದ ಶಾಸಕ ಪಿ. ರಾಜೀವ್ ಸ್ಪಷ್ಟಪಡಿಸಿದರು.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾವಿಲ್ಲ, ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ವಿಚಾರದಲ್ಲೂ ಗೊಂದಲವಿಲ್ಲ. ರಾಮುಲು ಎಲ್ಲೂ ಡಿಸಿಎಂ ಮಾಡಿ ಎಂದು ಕೇಳಿಲ್ಲ ಎಂದು ಹೇಳಿದರು.
‘ಬೆಳಗಾವಿ ಜಿಲ್ಲೆಗೆ ಹೆಚ್ಚಿನ ಸಚಿವ ಸ್ಥಾನ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ‘ಸರ್ಕಾರ ರಚನೆಗೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಬೆಳಗಾವಿ ಪ್ರಮುಖ ಪಾತ್ರವಹಿಸಿದೆ. ಆದ್ದರಿಂದ ಆ ಜಿಲ್ಲೆಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ ಅಷ್ಟೇ’ ಎಂದರು.