ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿರಕ್ಕಿಂತ ಕೆಳಗೆ ಇಳಿದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ

Last Updated 23 ಅಕ್ಟೋಬರ್ 2020, 3:22 IST
ಅಕ್ಷರ ಗಾತ್ರ

ದಾವಣಗೆರೆ: ಆಗಸ್ಟ್‌ನಲ್ಲಿ ಸಾವಿರ ದಾಟಿ ಹೋಗಿದ್ದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದೇ ಸಮನೆ ಏರಿಕೆಯಾಗಿ ಮೂರು ಸಾವಿರ ದಾಟಿತ್ತು. ಬಳಿಕ ಇದೇ ಮೊದಲ ಬಾರಿಗೆ ಸಾವಿರದ ಒಳಗೆ ಇಳಿದಿದೆ.

ಜಿಲ್ಲೆಯಲ್ಲಿ 58 ಮಂದಿಗೆ ಕೊರೊನಾ ಇರುವುದು ಗುರುವಾರ ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. 314 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಹರಿಹರ ತಾಲ್ಲೂಕು ಜಿಗಳಿಯ 70 ವರ್ಷದ ವೃದ್ಧೆ ತೀವ್ರ ಉಸಿರಾಟದ ಸಮಸ್ಯೆ, ಮಧುಮೇಹ ಮತ್ತು ರಕ್ತದೊತ್ತಡದಿಂದ ನಿಧನರಾದರು.

ದಾವಣಗೆರೆ ತಾಲ್ಲೂಕಿನಲ್ಲಿ 21, ಹರಿಹರ ತಾಲ್ಲೂಕಿನಲ್ಲಿ 14, ಹೊನ್ನಾಳಿ–ನ್ಯಾಮತಿ ತಾಲ್ಲೂಕಿನಲ್ಲಿ 12, ಚನ್ನಗಿರಿ ತಾಲ್ಲೂಕಿನಲ್ಲಿ 9 ಹಾಗೂ ಜಗಳೂರು ತಾಲ್ಲೂಕಿನಲ್ಲಿ 2 ಮಂದಿಗೆ ಕೊರೊನಾ ಇರುವುದು ಖಚಿತವಾಗಿದೆ.

ಇಲ್ಲಿಯವರೆಗೆ 19,936 ಮಂದಿಗೆ ಕೊರೊನಾ ಬಂದಿದೆ. 18,720 ಮಂದಿ ಗುಣಮುಖರಾಗಿದ್ದಾರೆ. 253 ಮಂದಿ ಮೃತಪಟ್ಟಿದ್ದಾರೆ. 963 ಸಕ್ರಿಯ ಪ್ರಕರಣಗಳಿವೆ.

ಗುಣಮುಖರಾಗುವವರ ಪ್ರಮಾಣ ಶೇ 91ಕ್ಕೆ ಏರಿದೆ. 36 ಮೊಬೈಲ್ ತಂಡಗಳು ಹಾಗೂ ಪ್ರತಿ ಆರೋಗ್ಯ ಸಂಸ್ಥೆಗಳಲ್ಲಿ ಸ್ಥಳೀಯ ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ಕಿಟ್ ಗಳ ಲಭ್ಯತೆ ಅನುಸಾರವಾಗಿ ಜಿಲ್ಲೆಯಲ್ಲಿ ಬಹುತೇಕ ಗುರಿ ಸಾಧಿಸಲಾಗುತ್ತಿದೆ. ಕೋವಿಡ್ ಪರೀಕ್ಷೆಗಳ ಮತ್ತು ಪ್ರಯೋಗಶಾಲೆಗಳ ಚಟುವಟಿಕೆಯನ್ನು ಖುದ್ದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಪ್ರಗತಿ ಪರಿಶೀಲನೆ ಮಾಡುತ್ತಿದ್ದಾರೆ. ಹಾಗಾಗಿ ಪರೀಕ್ಷೆಗಳು ಜಾಸ್ತಿಯಾಗುತ್ತಿದ್ದು, ಕೊರೊನಾ ಪಾಸಿಟಿವ್‌ ಸಂಖ್ಯೆ ಕಡಿಮೆಯಾಗುತ್ತಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸದೇ ಇದ್ದರೆ ಮತ್ತೆ ಹೆಚ್ಚಾಗುವ ಅಪಾಯ ಇದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಿ.ಡಿ. ರಾಘವನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT