<p><strong>ದಾವಣಗೆರೆ</strong>: ಪ್ರತಿ ನಿಮಿಷಕ್ಕೆ ಸಾವಿರ ಲೀಟರ್ ಆಮ್ಲಜನಕ ಉತ್ಪಾದನೆ ಮಾಡುವ ಸಾಮರ್ಥ್ಯದ ಘಟಕವನ್ನು ಜಿಲ್ಲೆಗೆ ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.</p>.<p>ಕೊರೊನಾ ಸೋಂಕಿತರಿಗೆ ಆಮ್ಲಜನಕ ಕೊರತೆಯಾಗಬಾರದು ಎಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ₹ 34 ಕೋಟಿ ವೆಚ್ಚದಲ್ಲಿ 28 ಘಟಕಗಳನ್ನು ತೆರೆಯಲು ನಿರ್ಧರಿಸಿದೆ. ಅದರಲ್ಲಿ ದಾವಣಗೆರೆ ಘಟಕವೂ ಒಂದು. ₹ 82 ಲಕ್ಷ ವೆಚ್ಚದಲ್ಲಿ ಈ ಘಟಕ ನಿರ್ಮಾಣಗೊಳ್ಳಲಿದೆ. ಕೇಂದ್ರ ಸರ್ಕಾರ ಸ್ವಾಮ್ಯದ ಒಎನ್ಜಿಸಿ ಹಾಗೂ ಎಂಆರ್ಪಿಎಲ್ ಕಂಪನಿಗಳಿಗೆ ಈ ಘಟಕ ಸ್ಥಾಪಿಸುವ ಹೊಣೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಜೂನ್ 30ರ ಒಳಗೆ ಎಲ್ಲ ಘಟಕಗಳು ಪೂರ್ಣಗೊಂಡು ಕಾರ್ಯಾರಂಭಿಸಲಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂಧನ ಸಚಿವ ಧರ್ಮೇಂದ್ರ ಪ್ರಧಾನ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರ ಮುತುವರ್ಜಿಯಿಂದ ಈ ಘಟಕ ಆರಂಭಗೊಳ್ಳಲಿದೆ ಎಂದು ಸಂಸದರು ಹೇಳಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಪ್ರತಿ ನಿಮಿಷಕ್ಕೆ ಸಾವಿರ ಲೀಟರ್ ಆಮ್ಲಜನಕ ಉತ್ಪಾದನೆ ಮಾಡುವ ಸಾಮರ್ಥ್ಯದ ಘಟಕವನ್ನು ಜಿಲ್ಲೆಗೆ ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.</p>.<p>ಕೊರೊನಾ ಸೋಂಕಿತರಿಗೆ ಆಮ್ಲಜನಕ ಕೊರತೆಯಾಗಬಾರದು ಎಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ₹ 34 ಕೋಟಿ ವೆಚ್ಚದಲ್ಲಿ 28 ಘಟಕಗಳನ್ನು ತೆರೆಯಲು ನಿರ್ಧರಿಸಿದೆ. ಅದರಲ್ಲಿ ದಾವಣಗೆರೆ ಘಟಕವೂ ಒಂದು. ₹ 82 ಲಕ್ಷ ವೆಚ್ಚದಲ್ಲಿ ಈ ಘಟಕ ನಿರ್ಮಾಣಗೊಳ್ಳಲಿದೆ. ಕೇಂದ್ರ ಸರ್ಕಾರ ಸ್ವಾಮ್ಯದ ಒಎನ್ಜಿಸಿ ಹಾಗೂ ಎಂಆರ್ಪಿಎಲ್ ಕಂಪನಿಗಳಿಗೆ ಈ ಘಟಕ ಸ್ಥಾಪಿಸುವ ಹೊಣೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಜೂನ್ 30ರ ಒಳಗೆ ಎಲ್ಲ ಘಟಕಗಳು ಪೂರ್ಣಗೊಂಡು ಕಾರ್ಯಾರಂಭಿಸಲಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂಧನ ಸಚಿವ ಧರ್ಮೇಂದ್ರ ಪ್ರಧಾನ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರ ಮುತುವರ್ಜಿಯಿಂದ ಈ ಘಟಕ ಆರಂಭಗೊಳ್ಳಲಿದೆ ಎಂದು ಸಂಸದರು ಹೇಳಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>