ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಈ ಹಿಂದೆ ಯಡಿಯೂರಪ್ಪ ಅವರು ಕೆಜೆಪಿ ಕಟ್ಟಿದಾಗ ಬಿಜೆಪಿಯಿಂದ 40 ಜನ ಗೆದ್ದರು. ಕೆಜೆಪಿ 6 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಈ ಹಿಂದೆ ಹೈಕಮಾಂಡ್ಗೆ ಕೊಟ್ಟ ಮಾತಿನಂತೆ ಅವರು ಈಗ ರಾಜೀನಾಮೆ ನೀಡಿದ್ದಾರೆ. ಪಕ್ಷದ ವರಿಷ್ಠ ನಿರ್ಧಾರಕ್ಕೆ ಬೆಲೆ ಕೊಟ್ಟು ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಬಿಜೆಪಿ ಶಿಸ್ತಿನ ಪಕ್ಷ ಎಂಬುದನ್ನು ತೋರಿಸಿಕೊಟ್ಟಿದ್ದಾರೆ’ ಎಂದರು.