<p><strong>ಕಡರನಾಯ್ಕನಹಳ್ಳಿ:</strong> ಕಡರನಾಯ್ಕನಹಳ್ಳಿಯಿಂದ ಕೊಕ್ಕನೂರು, ಜಿ.ಟಿ. ಕಟ್ಟೆ, ಮೂಗಿನಗೊಂದಿಯವರೆಗಿನ ರಸ್ತೆ ಕಾಮಗಾರಿ 2 ವರ್ಷಗಳಿಂದ ನಡೆಯುತ್ತಿದ್ದರೂ, ಪೂರ್ಣಗೊಂಡಿಲ್ಲ. ಇದರಿಂದಾಗಿ ವಾಹನ ಸವಾರರು ಸಂಕಷ್ಟ ಎದುರಿಸುತ್ತಿದ್ದಾರೆ. </p>.<p>ಕಡರನಾಯ್ಕನಹಳ್ಳಿ ಕೊಕ್ಕನೂರು ಮಧ್ಯದ ಭದ್ರಾ ಕಾಲುವೆಯಿಂದ ಜಿ.ಟಿ. ಕಟ್ಟೆ ಮತ್ತು ಮೂಗಿನಗೊಂದಿವರೆಗಿನ ರಸ್ತೆ ಕಾಮಗಾರಿಗೆ ₹ 4.75 ಕೋಟಿ ಮೊತ್ತದ ಟೆಂಡರ್ ಅನ್ನು ರಾಯಚೂರು ಮೂಲದ ಗುತ್ತಿಗೆದಾರ ವಿರುಪಾಕ್ಷಪ್ಪ ಬಳೆ ಎಂಬುವರು ಪಡೆದಿದ್ದಾರೆ. </p>.<p>2 ವರ್ಷಗಳಿಂದಲೂ ಗುತ್ತಿಗೆದಾರ ಇಚ್ಛೆ ಬಂದಾಗ ಕಾಮಗಾರಿ ಪ್ರಾರಂಭಿಸುತ್ತಾರೆ. ಮತ್ತೆ 4–5 ತಿಂಗಳು ಕೆಲಸ ನಿಲ್ಲಿಸುತ್ತಾರೆ. ಭತ್ತದ ಕಟಾವು ಪ್ರಾರಂಭವಾಗಿದೆ. ಟ್ರ್ಯಾಕ್ಟರ್ ಮೂಲಕ ಹುಲ್ಲನ್ನು ಸಾಗಿಸುವುದೇ ಸವಾಲಾಗಿದೆ. </p>.<p>ಅಲ್ಲಲ್ಲಿ ರಸ್ತೆಗೆ ಜೆಲ್ಲಿ ಹರಡಲಾಗಿದೆ. ಮತ್ತೊಂದೆಡೆ ರಸ್ತೆಯುದ್ದಕ್ಕೂ ಜೆಲ್ಲಿ ಕಲ್ಲುಗಳ ಗುಡ್ಡೆಗಳನ್ನು ಹಾಕಲಾಗಿದೆ, ಕೆಲವೆಡೆ ಕಳಪೆ ಮಣ್ಣು ಹಾಕಲಾಗಿದೆ. ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಚ್ಚಿನ ಸಮಸ್ಯೆ ಆಗುತ್ತಿದೆ. ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. </p>.<p>‘ಗುತ್ತಿಗೆದಾರರಿಗೆ ಈಗಾಗಲೇ ನೋಟಿಸ್ ನೀಡಿದ್ದೇವೆ. ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸು ಮಾಡಿದ್ದೇವೆ. ಶೀಘ್ರವೇ ಪರ್ಯಾಯ ವ್ಯವಸ್ಥೆಯ ಮೂಲಕ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದು ಎಇಇ ಶಿವಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>‘ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಲೋಕೋಪಯೋಗಿ ಇಲಾಖೆ ಬಳಿ ಧರಣಿ ನಡೆಸುತ್ತೇವೆ’ ಜಿ.ಟಿ.ಕಟ್ಟೆಯ ರಮೇಶ್ ಎಚ್ಚರಿಸಿದ್ದಾರೆ. </p>.<p>ಈ ಭಾಗದ ಜನರು ಈ ರಸ್ತೆಯನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ. ಶೀಘ್ರವೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡರನಾಯ್ಕನಹಳ್ಳಿ:</strong> ಕಡರನಾಯ್ಕನಹಳ್ಳಿಯಿಂದ ಕೊಕ್ಕನೂರು, ಜಿ.ಟಿ. ಕಟ್ಟೆ, ಮೂಗಿನಗೊಂದಿಯವರೆಗಿನ ರಸ್ತೆ ಕಾಮಗಾರಿ 2 ವರ್ಷಗಳಿಂದ ನಡೆಯುತ್ತಿದ್ದರೂ, ಪೂರ್ಣಗೊಂಡಿಲ್ಲ. ಇದರಿಂದಾಗಿ ವಾಹನ ಸವಾರರು ಸಂಕಷ್ಟ ಎದುರಿಸುತ್ತಿದ್ದಾರೆ. </p>.<p>ಕಡರನಾಯ್ಕನಹಳ್ಳಿ ಕೊಕ್ಕನೂರು ಮಧ್ಯದ ಭದ್ರಾ ಕಾಲುವೆಯಿಂದ ಜಿ.ಟಿ. ಕಟ್ಟೆ ಮತ್ತು ಮೂಗಿನಗೊಂದಿವರೆಗಿನ ರಸ್ತೆ ಕಾಮಗಾರಿಗೆ ₹ 4.75 ಕೋಟಿ ಮೊತ್ತದ ಟೆಂಡರ್ ಅನ್ನು ರಾಯಚೂರು ಮೂಲದ ಗುತ್ತಿಗೆದಾರ ವಿರುಪಾಕ್ಷಪ್ಪ ಬಳೆ ಎಂಬುವರು ಪಡೆದಿದ್ದಾರೆ. </p>.<p>2 ವರ್ಷಗಳಿಂದಲೂ ಗುತ್ತಿಗೆದಾರ ಇಚ್ಛೆ ಬಂದಾಗ ಕಾಮಗಾರಿ ಪ್ರಾರಂಭಿಸುತ್ತಾರೆ. ಮತ್ತೆ 4–5 ತಿಂಗಳು ಕೆಲಸ ನಿಲ್ಲಿಸುತ್ತಾರೆ. ಭತ್ತದ ಕಟಾವು ಪ್ರಾರಂಭವಾಗಿದೆ. ಟ್ರ್ಯಾಕ್ಟರ್ ಮೂಲಕ ಹುಲ್ಲನ್ನು ಸಾಗಿಸುವುದೇ ಸವಾಲಾಗಿದೆ. </p>.<p>ಅಲ್ಲಲ್ಲಿ ರಸ್ತೆಗೆ ಜೆಲ್ಲಿ ಹರಡಲಾಗಿದೆ. ಮತ್ತೊಂದೆಡೆ ರಸ್ತೆಯುದ್ದಕ್ಕೂ ಜೆಲ್ಲಿ ಕಲ್ಲುಗಳ ಗುಡ್ಡೆಗಳನ್ನು ಹಾಕಲಾಗಿದೆ, ಕೆಲವೆಡೆ ಕಳಪೆ ಮಣ್ಣು ಹಾಕಲಾಗಿದೆ. ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಚ್ಚಿನ ಸಮಸ್ಯೆ ಆಗುತ್ತಿದೆ. ಈ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. </p>.<p>‘ಗುತ್ತಿಗೆದಾರರಿಗೆ ಈಗಾಗಲೇ ನೋಟಿಸ್ ನೀಡಿದ್ದೇವೆ. ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸು ಮಾಡಿದ್ದೇವೆ. ಶೀಘ್ರವೇ ಪರ್ಯಾಯ ವ್ಯವಸ್ಥೆಯ ಮೂಲಕ ಕಾಮಗಾರಿ ಪೂರ್ಣಗೊಳಿಸಲಾಗುವುದು’ ಎಂದು ಎಇಇ ಶಿವಮೂರ್ತಿ ‘ಪ್ರಜಾವಾಣಿ’ಗೆ ತಿಳಿಸಿದರು. </p>.<p>‘ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಲೋಕೋಪಯೋಗಿ ಇಲಾಖೆ ಬಳಿ ಧರಣಿ ನಡೆಸುತ್ತೇವೆ’ ಜಿ.ಟಿ.ಕಟ್ಟೆಯ ರಮೇಶ್ ಎಚ್ಚರಿಸಿದ್ದಾರೆ. </p>.<p>ಈ ಭಾಗದ ಜನರು ಈ ರಸ್ತೆಯನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ. ಶೀಘ್ರವೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>