<p>ಮಲೇಬೆನ್ನೂರು: ಸಮೀಪದ ಉಕ್ಕಡಗಾತ್ರಿಯ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ನೀರಿನ ಸೆಳವಿಗೆ ಸಿಲುಕಿ ಇಬ್ಬರು ಸಹೋದರಿಯರು ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ.</p>.<p>ಮಾಯಕೊಂಡ ಹೋಬಳಿಯ ಹುಚ್ಚವ್ವನಹಳ್ಳಿ ಗ್ರಾಮದ ವೀರಾಚಾರಿ ಅವರ ಪುತ್ರಿಯರಾದ ಚೈತ್ರಾ (19), ಪುಷ್ಪಾ (17) ನಾಪತ್ತೆಯಾದವರು.</p>.<p>ಚೈತ್ರಾ ಅವರನ್ನು ಹೊಳಲ್ಕೆರೆ ತಾಲ್ಲೂಕಿನ ಗುಂಡೇರಿಗ್ರಾಮದ ಕಾರ್ತಿಕ್ ಅವರ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಪುಷ್ಪಾ ದಾವಣಗೆರೆಯ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.</p>.<p>‘ಕುಟುಂಬ ಸಮೇತ ಸುಕ್ಷೇತ್ರಕ್ಕೆ ಬಂದಿದ್ದ ಯಾತ್ರಾರ್ಥಿಗಳು ಸ್ನಾನ ಮಾಡಲು ನದಿಗೆ ಇಳಿದಿದ್ದಾರೆ. ಸೆಳವಿನ ರಭಸಕ್ಕೆ ಸಿಲುಕಿ ನೋಡ ನೋಡುತ್ತಿದ್ದಂತೆ ಮುಳುಗಿ ಕಣ್ಮರೆಯಾದರು. ಅವರನ್ನು ಎಳೆದು ತರಲು ಆಗಲಿಲ್ಲ’ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ಡಾ. ಎಂ. ಬಿ. ಅಶ್ವತ್ಥ, ಪಿಎಸ್ಐ ರವಿಕುಮಾರ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಅಗ್ನಿಶಾಮಕ ದಳದ ತುರ್ತು ಸೇವಾ ಸಿಬ್ಬಂದಿ ನಾಪತ್ತೆಯಾದವರ ಹುಡುಕಾಟ ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲೇಬೆನ್ನೂರು: ಸಮೀಪದ ಉಕ್ಕಡಗಾತ್ರಿಯ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ನೀರಿನ ಸೆಳವಿಗೆ ಸಿಲುಕಿ ಇಬ್ಬರು ಸಹೋದರಿಯರು ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ.</p>.<p>ಮಾಯಕೊಂಡ ಹೋಬಳಿಯ ಹುಚ್ಚವ್ವನಹಳ್ಳಿ ಗ್ರಾಮದ ವೀರಾಚಾರಿ ಅವರ ಪುತ್ರಿಯರಾದ ಚೈತ್ರಾ (19), ಪುಷ್ಪಾ (17) ನಾಪತ್ತೆಯಾದವರು.</p>.<p>ಚೈತ್ರಾ ಅವರನ್ನು ಹೊಳಲ್ಕೆರೆ ತಾಲ್ಲೂಕಿನ ಗುಂಡೇರಿಗ್ರಾಮದ ಕಾರ್ತಿಕ್ ಅವರ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಪುಷ್ಪಾ ದಾವಣಗೆರೆಯ ಕಾಲೇಜೊಂದರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.</p>.<p>‘ಕುಟುಂಬ ಸಮೇತ ಸುಕ್ಷೇತ್ರಕ್ಕೆ ಬಂದಿದ್ದ ಯಾತ್ರಾರ್ಥಿಗಳು ಸ್ನಾನ ಮಾಡಲು ನದಿಗೆ ಇಳಿದಿದ್ದಾರೆ. ಸೆಳವಿನ ರಭಸಕ್ಕೆ ಸಿಲುಕಿ ನೋಡ ನೋಡುತ್ತಿದ್ದಂತೆ ಮುಳುಗಿ ಕಣ್ಮರೆಯಾದರು. ಅವರನ್ನು ಎಳೆದು ತರಲು ಆಗಲಿಲ್ಲ’ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ಡಾ. ಎಂ. ಬಿ. ಅಶ್ವತ್ಥ, ಪಿಎಸ್ಐ ರವಿಕುಮಾರ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಅಗ್ನಿಶಾಮಕ ದಳದ ತುರ್ತು ಸೇವಾ ಸಿಬ್ಬಂದಿ ನಾಪತ್ತೆಯಾದವರ ಹುಡುಕಾಟ ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>