ಈ ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಎಎಸ್ಪಿ ಎಂ. ರಾಜೀವ್, ಡಿವೈಎಸ್ಪಿ ನಾಗೇಶ ಯು. ಐತಾಳ ಮತ್ತು ಕೇಂದ್ರ ವೃತ್ತ ನಿರೀಕ್ಷಕ ಗುರುಬಸವರಾಜ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ಕೆಟಿಜೆ ನಗರ ಪೊಲೀಸ್ ಠಾಣೆಯ ಪಿಎಸ್ಐಗಳಾದ ಅಬ್ದುಲ್ ಖಾದರ್ ಜಿಲಾನಿ, ಆರ್. ವೀರೇಶ ಹಾಗೂ ಸಿಬ್ಬಂದಿ ಶಂಕರ್ ಜಾಧವ್, ಪ್ರಕಾಶ, ದಾದಾ ಖಲಂದರ್, ಮಂಜುನಾಥ, ಗಿರೀಶ, ರಾಘವೇಂದ್ರ ಇದ್ದ ತಂಡವು ತನಿಖೆ ನಡೆಸುತ್ತಿತ್ತು. ಮೊಬೈಲ್ ಐಎಂಇಐ ನಂಬರ್ನ ಡಿಸಿಆರ್ ಮಾಹಿತಿ ಆಧಾರದಲ್ಲಿ ಪತ್ತೆ ಕಾರ್ಯದಲ್ಲಿದ್ದಾಗ ಬೆಂಗಳೂರಿನ ರೈಲ್ವೆ ಪೊಲೀಸರು ಅಲ್ಲಿನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿತ್ತು.