ದಾವಣಗೆರೆ: ಶಿವನಗರ ಹಾಗೂ ರಜಾವುಲ್ ಮುಸ್ತಫಾ ನಗರದಲ್ಲಿ ನಡೆದಿದ್ದ ಎರಡು ಮನೆಗಳ್ಳತನಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಆಜಾದ್ನಗರ ಠಾಣೆ ಪೊಲೀಸರು ಬಂಧಿಸಿ ಅವರಿಂದ ಆಭರಣವನ್ನು ವಶಪಡಿಸಿಕೊಂಡಿದ್ದಾರೆ.
ಬಾಷಾನಗರದ ಇಬ್ರಾಹಿಂ ಖಲೀಲ್ ವುಲ್ಲಾ ಬಂಧಿತ. ಮತ್ತೊಬ್ಬ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಕಳ್ಳತನವಾಗಿದ್ದ ₹1.32 ಲಕ್ಷ ಮೌಲ್ಯದ 35 ಗ್ರಾಂ ಚಿನ್ನ, 20 ಗ್ರಾಂ ಬೆಳ್ಳಿ ಆಭರಣವನ್ನು ಹಾಗೂ ₹ 6 ಸಾವಿರ ವಶಪಡಿಸಿಕೊಳ್ಳಲಾಗಿದೆ.ಇಬ್ಬರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಸ್ಪಿ ಹನುಮಂತರಾಯ ಆಜಾದ್ ನಗರ ಪಿಎಸ್ಐ ಕೆ.ಎನ್. ಶೈಲಜಾ ನೇತೃತ್ವದಲ್ಲಿ ತಂಡ ರಚಿಸಿದ್ದರು. ಎಎಸ್ಐ ಸುರೇಶ್, ಬಷೀರ್ ಅಹಮದ್, ಎಚ್.ಸಿ. ಮಂಜುನಾಥ ನಾಯ್ಕ, ಹನುಮಂತಪ್ಪ ಮಡ್ಡಿ, ರವಿನಾಯ್ಕ, ಪ್ರೊರಾನಾಯ್ಕ್ ಕಾರ್ಯಾಚರಣೆಯಲ್ಲಿದ್ದರು.