ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಯಲ್ಲಿ ಕಳವು: ಒಬ್ಬನ ಬಂಧನ

Last Updated 5 ಅಕ್ಟೋಬರ್ 2020, 2:20 IST
ಅಕ್ಷರ ಗಾತ್ರ

ದಾವಣಗೆರೆ: ಶಿವನಗರ ಹಾಗೂ ರಜಾವುಲ್ ಮುಸ್ತಫಾ ನಗರದಲ್ಲಿ ನಡೆದಿದ್ದ ಎರಡು ಮನೆಗಳ್ಳತನಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಆಜಾದ್‌ನಗರ ಠಾಣೆ ಪೊಲೀಸರು ಬಂಧಿಸಿ ಅವರಿಂದ ಆಭರಣವನ್ನು ವಶಪಡಿಸಿಕೊಂಡಿದ್ದಾರೆ.

ಬಾಷಾನಗರದ ಇಬ್ರಾಹಿಂ ಖಲೀಲ್ ವುಲ್ಲಾ ಬಂಧಿತ. ಮತ್ತೊಬ್ಬ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಕಳ್ಳತನವಾಗಿದ್ದ ₹1.32 ಲಕ್ಷ ಮೌಲ್ಯದ 35 ಗ್ರಾಂ ಚಿನ್ನ, 20 ಗ್ರಾಂ ಬೆಳ್ಳಿ ಆಭರಣವನ್ನು ಹಾಗೂ ₹ 6 ಸಾವಿರ ವಶಪಡಿಸಿಕೊಳ್ಳಲಾಗಿದೆ.ಇಬ್ಬರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಸ್ಪಿ ಹನುಮಂತರಾಯ ಆಜಾದ್‌ ನಗರ ಪಿಎಸ್ಐ ಕೆ.ಎನ್. ಶೈಲಜಾ ನೇತೃತ್ವದಲ್ಲಿ ತಂಡ ರಚಿಸಿದ್ದರು. ಎಎಸ್ಐ ಸುರೇಶ್, ಬಷೀರ್‌ ಅಹಮದ್, ಎಚ್.ಸಿ. ಮಂಜುನಾಥ ನಾಯ್ಕ, ಹನುಮಂತಪ್ಪ ಮಡ್ಡಿ, ರವಿನಾಯ್ಕ, ಪ್ರೊರಾನಾಯ್ಕ್ ಕಾರ್ಯಾಚರಣೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT