<p><strong>ಹರಿಹರ</strong>: ತುಂಗಭದ್ರಾ ಸೇತುವೆ ಸಮೀಪದ ರಸ್ತೆ ಕಾಮಗಾರಿ ವಿಚಾರದಲ್ಲಿ ಮಾಜಿ ಶಾಸಕ ಬಿ.ಪಿ. ಹರೀಶ್ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅನಗತ್ಯವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಶಾಸಕ ಎಸ್. ರಾಮಪ್ಪ ಅವರು ಸಂಸದರಿಗೆ ದೂರು ಸಲ್ಲಿಸಿದರು.</p>.<p>ನಗರದ ಲೇಬರ್ ಕಾಲೊನಿಯ ಉದ್ಯಾನಕ್ಕೆ ಧೂಡಾ ಅನುದಾನದಲ್ಲಿ ನಡೆಯುತ್ತಿರುವ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿದ ನಂತರ ಮಾತನಾಡಿದರು.</p>.<p>ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿರುವ ನಾಡ್ ಬಂದ್ ಷಾ ವಲಿ ದರ್ಗಾವನ್ನು ಈ ಹಿಂದೆ ನಡೆದ ರಸ್ತೆ ವಿಸ್ತರಣೆ ವೇಳೆ ತೆರವುಗೊಳಿಸಲಾಗಿತ್ತು. ಭಕ್ತರ ದೇಣಿಗೆ ಹಣದಲ್ಲಿ ಮತ್ತೆ ನಿರ್ಮಿಸಲಾಗಿದೆ. ದರ್ಗಾ ಮುಂದಿನ ರಸ್ತೆ ನಿರ್ಮಾಣಕ್ಕೆ ಮಾಜಿ ಶಾಸಕ ಬಿ.ಪಿ. ಹರೀಶ್ ಜಿಲ್ಲಾಡಳಿತ ಮೇಲೆ ಒತ್ತಡ ಹೇರುವ ಮೂಲಕ ಅನಗತ್ಯವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p>‘ನಗರಸಭೆಗೆ ಮಂಜೂರಾದ₹ 8 ಕೋಟಿ ಅನುದಾನವನ್ನು ಸರ್ಕಾರ ಹಿಂಪಡೆದಿದೆ. ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ. ಮುಂದಿನ ವಾರ ಸಂಸದರೊಂದಿಗೆ ಮಂತ್ರಿ ಅವರನ್ನು ಭೇಟಿ ಮಾಡುತ್ತೇನೆ’ ಎಂದು ತಿಳಿಸಿದರು.</p>.<p>ಧೂಡಾ ಸದಸ್ಯ ರಾಜು ರೋಖಡೆ ಮಾತನಾಡಿ, ‘ರಸ್ತೆ ವಿಚಾರದಲ್ಲಿ ಯಾರು ಅಡ್ಡಿಪಡಿಸಿಲ್ಲ. ಜಿಲ್ಲಾಡಳಿತ ಲೋಕಪಯೋಗಿ ಇಲಾಖೆಯ ನಿಯಮಗಳನ್ನು ಪರಿಶೀಲಿಸಿ, ಕಾನೂನು ರೀತಿ ಕ್ರಮ ಕೈಗೊಂಡು ರಸ್ತೆ ನಿರ್ಮಿಸಲಿ ಎಂದು ತಿರುಗೇಟು’ ನೀಡಿದರು.</p>.<p>ಕಾಂಗ್ರೆಸ್ ಬೆಂಬಲಿಗರು ವಾಗ್ವಾದಕ್ಕಿಳಿದಾಗ ಮಧ್ಯ ಪ್ರವೇಶಿಸಿದ ಸಂಸದ ಜಿ.ಎಂ. ಸಿದ್ದೇಶ್ವರ, ‘ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚೆ ನಡೆಸುತ್ತೇನೆ. ಸ್ಥಳೀಯ ನಾಯಕರು ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಿ’ ಎಂದು ಸಲಹೆ ನೀಡಿದರು.</p>.<p>ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ‘ನಗರದ ಉದ್ಯಾನವನದ ಅಭಿವೃದ್ಧಿಗೆ ₹ 1.50 ಕೋಟಿ, ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ₹ 35 ಲಕ್ಷ ಹಾಗೂ ಅಲಂಕಾರಿಕ ದೀಪಗಳ ಅಳವಡಿಕೆಗೆ ಧೂಡಾದಿಂದ ಅನುದಾನ ಬಿಡುಗಡೆಯಾಗಿದೆ’ ಎಂದು ತಿಳಿಸಿದರು.</p>.<p>ಬಹುತೇಕ ಕಾಮಗಾರಿಗಳಿಗೆ ಗುತ್ತಿಗೆದಾರರು ಟೆಂಡರ್ ಮೊತ್ತಕ್ಕಿಂತ ಕಡಿಮೆ ಮೊತ್ತಕ್ಕೆ ಬಿಡ್ ಮಾಡಿದ್ದಾರೆ. ಆದಕಾರಣ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಕಾಮಗಾರಿಯ ಗುಣಮಟ್ಟದ ಬಗ್ಗೆ ನಿಗಾವಹಿಸಬೇಕು ಎಂದು ಸಲಹೆ ನೀಡಿದರು.</p>.<p class="Subhead">ಗುತ್ತಿಗೆದಾರನಿಗೆ ನೋಟಿಸ್: ನಗರದಲ್ಲಿ ಕಾಮಗಾರಿಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸದ ಗುತ್ತಿಗೆದಾರ ಬಾಷಾ ಅವರಿಗೆ ನೋಟಿಸ್ ನೀಡಿ, ಕಾಮಗಾರಿಗಳಿಗೆ ಮರು ಟೆಂಡರ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕ ಎಸ್. ರಾಮಪ್ಪ ಈ ಸೂಚನೆಗೆ ಸಹಮತ ಸೂಚಿಸಿದರು.</p>.<p>ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ನಗರಸಭೆ ಅಧ್ಯಕ್ಷೆ ಡಿ.ಯು. ರತ್ನಾ, ಸದಸ್ಯರಾದ ಎನ್. ರಜನಿಕಾಂತ್, ಅಶ್ವಿನಿ, ಹನುಮಂತಪ್ಪ, ಎಇಇ ಎಸ್.ಎಸ್. ಬಿರಾದಾರ್, ದೂಡಾ ಎಇಇ ಶ್ರೀಕರ್, ಮುಖಂಡರಾದ ಎಚ್.ಎಂ. ಮಾರುತಿ ಶ್ರೇಷ್ಠಿ, ಮಾಲತೇಶ ಭಂಡಾರೆ, ಬಾತಿ ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ತುಂಗಭದ್ರಾ ಸೇತುವೆ ಸಮೀಪದ ರಸ್ತೆ ಕಾಮಗಾರಿ ವಿಚಾರದಲ್ಲಿ ಮಾಜಿ ಶಾಸಕ ಬಿ.ಪಿ. ಹರೀಶ್ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅನಗತ್ಯವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಶಾಸಕ ಎಸ್. ರಾಮಪ್ಪ ಅವರು ಸಂಸದರಿಗೆ ದೂರು ಸಲ್ಲಿಸಿದರು.</p>.<p>ನಗರದ ಲೇಬರ್ ಕಾಲೊನಿಯ ಉದ್ಯಾನಕ್ಕೆ ಧೂಡಾ ಅನುದಾನದಲ್ಲಿ ನಡೆಯುತ್ತಿರುವ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿದ ನಂತರ ಮಾತನಾಡಿದರು.</p>.<p>ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿರುವ ನಾಡ್ ಬಂದ್ ಷಾ ವಲಿ ದರ್ಗಾವನ್ನು ಈ ಹಿಂದೆ ನಡೆದ ರಸ್ತೆ ವಿಸ್ತರಣೆ ವೇಳೆ ತೆರವುಗೊಳಿಸಲಾಗಿತ್ತು. ಭಕ್ತರ ದೇಣಿಗೆ ಹಣದಲ್ಲಿ ಮತ್ತೆ ನಿರ್ಮಿಸಲಾಗಿದೆ. ದರ್ಗಾ ಮುಂದಿನ ರಸ್ತೆ ನಿರ್ಮಾಣಕ್ಕೆ ಮಾಜಿ ಶಾಸಕ ಬಿ.ಪಿ. ಹರೀಶ್ ಜಿಲ್ಲಾಡಳಿತ ಮೇಲೆ ಒತ್ತಡ ಹೇರುವ ಮೂಲಕ ಅನಗತ್ಯವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು.</p>.<p>‘ನಗರಸಭೆಗೆ ಮಂಜೂರಾದ₹ 8 ಕೋಟಿ ಅನುದಾನವನ್ನು ಸರ್ಕಾರ ಹಿಂಪಡೆದಿದೆ. ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ. ಮುಂದಿನ ವಾರ ಸಂಸದರೊಂದಿಗೆ ಮಂತ್ರಿ ಅವರನ್ನು ಭೇಟಿ ಮಾಡುತ್ತೇನೆ’ ಎಂದು ತಿಳಿಸಿದರು.</p>.<p>ಧೂಡಾ ಸದಸ್ಯ ರಾಜು ರೋಖಡೆ ಮಾತನಾಡಿ, ‘ರಸ್ತೆ ವಿಚಾರದಲ್ಲಿ ಯಾರು ಅಡ್ಡಿಪಡಿಸಿಲ್ಲ. ಜಿಲ್ಲಾಡಳಿತ ಲೋಕಪಯೋಗಿ ಇಲಾಖೆಯ ನಿಯಮಗಳನ್ನು ಪರಿಶೀಲಿಸಿ, ಕಾನೂನು ರೀತಿ ಕ್ರಮ ಕೈಗೊಂಡು ರಸ್ತೆ ನಿರ್ಮಿಸಲಿ ಎಂದು ತಿರುಗೇಟು’ ನೀಡಿದರು.</p>.<p>ಕಾಂಗ್ರೆಸ್ ಬೆಂಬಲಿಗರು ವಾಗ್ವಾದಕ್ಕಿಳಿದಾಗ ಮಧ್ಯ ಪ್ರವೇಶಿಸಿದ ಸಂಸದ ಜಿ.ಎಂ. ಸಿದ್ದೇಶ್ವರ, ‘ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚೆ ನಡೆಸುತ್ತೇನೆ. ಸ್ಥಳೀಯ ನಾಯಕರು ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಿ’ ಎಂದು ಸಲಹೆ ನೀಡಿದರು.</p>.<p>ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ‘ನಗರದ ಉದ್ಯಾನವನದ ಅಭಿವೃದ್ಧಿಗೆ ₹ 1.50 ಕೋಟಿ, ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ₹ 35 ಲಕ್ಷ ಹಾಗೂ ಅಲಂಕಾರಿಕ ದೀಪಗಳ ಅಳವಡಿಕೆಗೆ ಧೂಡಾದಿಂದ ಅನುದಾನ ಬಿಡುಗಡೆಯಾಗಿದೆ’ ಎಂದು ತಿಳಿಸಿದರು.</p>.<p>ಬಹುತೇಕ ಕಾಮಗಾರಿಗಳಿಗೆ ಗುತ್ತಿಗೆದಾರರು ಟೆಂಡರ್ ಮೊತ್ತಕ್ಕಿಂತ ಕಡಿಮೆ ಮೊತ್ತಕ್ಕೆ ಬಿಡ್ ಮಾಡಿದ್ದಾರೆ. ಆದಕಾರಣ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಕಾಮಗಾರಿಯ ಗುಣಮಟ್ಟದ ಬಗ್ಗೆ ನಿಗಾವಹಿಸಬೇಕು ಎಂದು ಸಲಹೆ ನೀಡಿದರು.</p>.<p class="Subhead">ಗುತ್ತಿಗೆದಾರನಿಗೆ ನೋಟಿಸ್: ನಗರದಲ್ಲಿ ಕಾಮಗಾರಿಗಳನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸದ ಗುತ್ತಿಗೆದಾರ ಬಾಷಾ ಅವರಿಗೆ ನೋಟಿಸ್ ನೀಡಿ, ಕಾಮಗಾರಿಗಳಿಗೆ ಮರು ಟೆಂಡರ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕ ಎಸ್. ರಾಮಪ್ಪ ಈ ಸೂಚನೆಗೆ ಸಹಮತ ಸೂಚಿಸಿದರು.</p>.<p>ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ನಗರಸಭೆ ಅಧ್ಯಕ್ಷೆ ಡಿ.ಯು. ರತ್ನಾ, ಸದಸ್ಯರಾದ ಎನ್. ರಜನಿಕಾಂತ್, ಅಶ್ವಿನಿ, ಹನುಮಂತಪ್ಪ, ಎಇಇ ಎಸ್.ಎಸ್. ಬಿರಾದಾರ್, ದೂಡಾ ಎಇಇ ಶ್ರೀಕರ್, ಮುಖಂಡರಾದ ಎಚ್.ಎಂ. ಮಾರುತಿ ಶ್ರೇಷ್ಠಿ, ಮಾಲತೇಶ ಭಂಡಾರೆ, ಬಾತಿ ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>