‘ಶಾಂತಿ ಕದಡುವ ಪ್ರಸಂಗಗಳು ಆಗಾಗ ನಡೆಯುತ್ತಿರುತ್ತವೆ. ಅಂಥ ಸಂದರ್ಭದಲ್ಲಿ ನಮ್ಮೆಲ್ಲ ವರಿಷ್ಠರು, ಹಿರಿಯರು ಕುಳಿತು ಮಾತನಾಡಿ ಸರಿಪಡಿಸಿದ್ದಾರೆ. ತಮ್ಮ ಅನುಭವ ಮುತ್ಸದ್ದಿತನ ತೋರಿದ್ದಾರೆ. ನಂಜನಗೂಡಿನ ದೇವಸ್ಥಾನ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಹಿರಿಯರ ಜತೆ, ಪಕ್ಷದ ಮುಖಂಡರ ಜತೆ, ಸ್ಥಳೀಯರ ಜತೆ ಕುಳಿತು ಮಾತನಾಡಿ ಸರಿಪಡಿಸುತ್ತೇವೆ. ಸರಿಯಾದ ಕ್ರಮ ಕೈಗೊಳ್ಳುತ್ತೇವೆ’ ಎಂದು ಅವರು ತಿಳಿಸಿದರು.