ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ ಅಂದ ಮಾತ್ರಕ್ಕೆ ನಾಯಕತ್ವ ಗೊಂದಲ ಇದೆ ಎನ್ನುವುದು ಸರಿಯಲ್ಲ. ಅಮಿತ್ ಶಾ ಯಡಿಯೂರಪ್ಪ ಅವರ ಬಗ್ಗೆ ಅಪಾರ ಗೌರವ ಇಟ್ಟುಕೊಂಡು ಮಾತಾಡಿದ್ದಾರೆ.ಯಡಿಯೂರಪ್ಪ, ಜಗದೀಶ ಶೆಟ್ಟರ್ ಮಾತುಕತೆ ಬಗ್ಗೆ ನನಗೆ ಗೊತ್ತಿಲ್ಲ.ಎಲ್ಲರೂ ಒಟ್ಟಾಗಿ ಪಕ್ಷ ಸಂಘಟನೆ ಮಾಡುತ್ತೇವೆ’ ಎಂದರು.