‘ಬೆಂಗಳೂರು ಮತ್ತು ಇತರ ಕಡೆಗಳಿಂದ ಸುಮಾರು 19,500 ಮಂದಿ ಬಂದಿದ್ದಾರೆ. ಈಗ ಅವರಿಗೆ ಕೆಮ್ಮು, ನೆಗಡಿ, ಜ್ವರ, ಗಂಟಲುಬಾಧೆ ಇದೆಯೇ ಎಂದು ಪರೀಕ್ಷಿಸಲು, ಇದ್ದರೆ ಚಿಕಿತ್ಸೆ ನೀಡಲು ಜಿಲ್ಲಾ ಆರೋಗ್ಯ ಅಧಿಕಾರಿ ಸೂಚನೆ ನೀಡಿದ್ದಾರೆ. ಆದರೆ ನಮ್ಮಲ್ಲಿ ಮಾಮೂಲಿ ಮಾಸ್ಕ್, ಸ್ಯಾನಿಟೈಜರ್ ಬಿಟ್ಟರೆ ಕೋವಿಡ್–19 ಇರಬಹುದಾದವರಿಗೆ ಚಿಕಿತ್ಸೆ ನೀಡಲು ಬೇಕಾದ ಸೌಕರ್ಯ ಕೊಟ್ಟಿಲ್ಲ’ ಎಂದು ನಗರ ಆರೋಗ್ಯ ಕೇಂದ್ರದ ವೈದ್ಯರೊಬ್ಬರು ಆರೋಪಿಸಿದರು.