ಸಿದ್ದು ನ್ಯಾಮಗೌಡ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಮುಂದಿನ ಸೀಟಿನಲ್ಲಿ ಕುಳಿತಿದ್ದ ಶಾಸಕರ ಎದೆ ಭಾಗ ಹಾಗೂ ಮೊಣಕಾಲಿಗೆ ತೀವ್ರ ಪೆಟ್ಟಾಗಿ ಪ್ರಜ್ಞಾಹೀನರಾಗಿದ್ದಾರೆ. ಕೂಡಲೇ ಅವರನ್ನು ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ಚಾಲಕ ಪರಮಾನಂದ ಅಂಬಿ ಹಾಗೂ ಕಾರಿನಲ್ಲಿದ್ದ ಶಾಸಕರ ಬೆಂಬಲಿಗರಾದ ಮೌಲಾನಾ ರಜ್ವಿ, ಅನ್ವರ್ ಮೊಮಿನ್ ಗಾಯಗೊಂಡಿದ್ದಾರೆ.