<p><strong>ದಾವಣಗೆರೆ: </strong>ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ಗಳನ್ನು ಪುನರ್ ಪ್ರಾರಂಭಿಸಲು ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಕೊರೊನಾ ನಿಯಂತ್ರಣ ಕುರಿತ ತುರ್ತು ಸಭೆಯಲ್ಲಿ ಅವರು ಮಾತನಾಡಿ, ‘ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಆಕ್ಸಿಜನ್ ಪೂರೈಕೆ ವ್ಯವಸ್ಥೆ ಮತ್ತು ಉಪಕರಣಗಳನ್ನು ಸುಸ್ಥಿಯಲ್ಲಿಡಬೇಕು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಜಿಲ್ಲೆಯಲ್ಲಿ 503 ಸಕ್ರಿಯ ಪ್ರಕರಣಗಳಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೋವಿಡ್ ಎರಡನೇ ಅಲೆಯ ಚೈನ್ ಲಿಂಕ್ ಅನ್ನು ಕಡಿತಗೊಳಿಸುವ ತುರ್ತು ಅಗತ್ಯವಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ತಡೆಗಟ್ಟಲು ಹಾಗೂ ಸೋಂಕಿತರಿಗೆ ಸಮರ್ಪಕ ವೈದ್ಯಕೀಯ ನೆರವು ನೀಡಲು ನಾವು ಸಿದ್ದರಾಗಬೇಕಿದೆ. 15 ದಿನಗಳಲ್ಲಿ ಹಾಸ್ಟೆಲ್ಗಳಲ್ಲಿ ಕೋವಿಡ್ ಹೆಲ್ತ್ಕೇರ್ ಸೆಂಟರ್ಗಳನ್ನು ಪ್ರಾರಂಭಿಸುವ ಅಗತ್ಯ ಬರಬಹುದು. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ‘ಏ. 22 ರ ಬಳಿಕ ಹಾಸ್ಟೆಲ್ಗಳು ಬಳಕೆಗೆ ಲಭ್ಯವಾಗಲಿದ್ದು, ಬಳಸಿಕೊಳ್ಳಲು ಅಗತ್ಯ ನೆರವು ಒದಗಿಸಲಾಗುವುದು’ ಎಂದರು.</p>.<p>‘ಕೊರೊನಾ ಸೋಂಕು ಪ್ರಕರಣಗಳನ್ನು ನಿಯಂತ್ರಿಸುವ ದಿಸೆಯಲ್ಲಿ ಯಾವುದೇ ವ್ಯವಸ್ಥೆ ಹಾಗೂ ನಿರ್ವಹಣೆ ಕೈಗೊಳ್ಳುವಲ್ಲಿ ಯಾವುದೇ ರೀತಿಯ ಅಡಚಣೆ ಉಂಟಾದಲ್ಲಿ ತಕ್ಷಣ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಮತ್ತು ಅಗತ್ಯವಿರುವ ಎಲ್ಲಾ ಉಪಕರಣಗಳು ಹಾಗೂ ಆಂಬುಲೆನ್ಸಗಳನ್ನು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು’ ಎಂದರು.</p>.<p>‘ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಈಗ 23 ಜನ ಐಸೋಲೇಷನ್ನಲ್ಲಿ ಇದ್ದು, 182 ಜನ ಹೋಂ ಐಸೋಲೇಷನ್ನಲ್ಲಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲೂ ನಿಗದಿತ ಪ್ರಮಾಣದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬೆಡ್ಗಳನ್ನು ಕಾಯ್ದಿರಿಸಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗಾಗಿ ಅಗತ್ಯ ಬೆಡ್, ಐಸಿಯು ಹಾಗೂ ವೆಂಟಿಲೇಟರ್ಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸುಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಡಿಎಚ್ಒ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಉಪಕರಣಗಳು ಸುಸ್ಥಿತಿಯಲ್ಲಿರುವ ಕುರಿತು ಎರಡು ದಿನಗಳ ಒಳಗೆ ದೃಢೀಕರಣವನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು. ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು’ ಎಂದು ಸೂಚನೆ ನೀಡಿದರು.</p>.<p>ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಕೊರೊನಾ ಟೆಸ್ಟ್ ದತ್ತಾಂಶವನ್ನು ಐಸಿಎಂಆರ್ ಪೋರ್ಟಲ್ನಲ್ಲಿ ಅಳವಡಿಸುವ ಕಾರ್ಯ ಬಾಕಿ ಉಳಿದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್,ಜಿಲ್ಲಾಸ್ಪತ್ರೆಯ ಸರ್ಜನ್ ಡಾ. ಜಯಪ್ರಕಾಶ್, ಡಿಎಚ್ಓ ಡಾ.ನಾಗರಾಜ್,ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ಕೌಸರ್ ರೇಷ್ಮಾ,ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಹಾಜರಿದ್ದರು.</p>.<p><strong>‘ಹೆಚ್ಚಿನ ಪ್ರಮಾಣದ ಚುಚ್ಚು ಮದ್ದು ನೀಡಿದರೆ ಕ್ರಮ’</strong><br />‘ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಯಂತೆಯೇ ಚುಚ್ಚುಮದ್ದನ್ನು ಬಳಸಬೇಕು. ಕಾನೂನು ಉಲ್ಲಂಘಿಸಿದರೆ ಕರ್ನಾಟಕ ವಿಪತ್ತು ನಿರ್ವಹಣೆ ಕಾಯ್ದೆಯಡಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಎಚ್ಚರಿಸಿದರು.</p>.<p>ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ಅಗತ್ಯವಿಲ್ಲದಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಕೇಳುತ್ತಿದ್ದಾರೆ ಎನ್ನುವ ವಿಷಯ ಕುರಿತು ಈ ಎಚ್ಚರಿಕೆ ನೀಡಿದರು.</p>.<p>ಕಾನೂನು ಉಲ್ಲಂಘಿಸಿದರೆ ಅಪರಾಧಕ್ಕೆ ₹50 ಸಾವಿರ ದಂಡ ಮತ್ತು 3 ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ಗಳನ್ನು ಪುನರ್ ಪ್ರಾರಂಭಿಸಲು ಗಂಭೀರ ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಕೊರೊನಾ ನಿಯಂತ್ರಣ ಕುರಿತ ತುರ್ತು ಸಭೆಯಲ್ಲಿ ಅವರು ಮಾತನಾಡಿ, ‘ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಆಕ್ಸಿಜನ್ ಪೂರೈಕೆ ವ್ಯವಸ್ಥೆ ಮತ್ತು ಉಪಕರಣಗಳನ್ನು ಸುಸ್ಥಿಯಲ್ಲಿಡಬೇಕು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಜಿಲ್ಲೆಯಲ್ಲಿ 503 ಸಕ್ರಿಯ ಪ್ರಕರಣಗಳಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೋವಿಡ್ ಎರಡನೇ ಅಲೆಯ ಚೈನ್ ಲಿಂಕ್ ಅನ್ನು ಕಡಿತಗೊಳಿಸುವ ತುರ್ತು ಅಗತ್ಯವಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ತಡೆಗಟ್ಟಲು ಹಾಗೂ ಸೋಂಕಿತರಿಗೆ ಸಮರ್ಪಕ ವೈದ್ಯಕೀಯ ನೆರವು ನೀಡಲು ನಾವು ಸಿದ್ದರಾಗಬೇಕಿದೆ. 15 ದಿನಗಳಲ್ಲಿ ಹಾಸ್ಟೆಲ್ಗಳಲ್ಲಿ ಕೋವಿಡ್ ಹೆಲ್ತ್ಕೇರ್ ಸೆಂಟರ್ಗಳನ್ನು ಪ್ರಾರಂಭಿಸುವ ಅಗತ್ಯ ಬರಬಹುದು. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ‘ಏ. 22 ರ ಬಳಿಕ ಹಾಸ್ಟೆಲ್ಗಳು ಬಳಕೆಗೆ ಲಭ್ಯವಾಗಲಿದ್ದು, ಬಳಸಿಕೊಳ್ಳಲು ಅಗತ್ಯ ನೆರವು ಒದಗಿಸಲಾಗುವುದು’ ಎಂದರು.</p>.<p>‘ಕೊರೊನಾ ಸೋಂಕು ಪ್ರಕರಣಗಳನ್ನು ನಿಯಂತ್ರಿಸುವ ದಿಸೆಯಲ್ಲಿ ಯಾವುದೇ ವ್ಯವಸ್ಥೆ ಹಾಗೂ ನಿರ್ವಹಣೆ ಕೈಗೊಳ್ಳುವಲ್ಲಿ ಯಾವುದೇ ರೀತಿಯ ಅಡಚಣೆ ಉಂಟಾದಲ್ಲಿ ತಕ್ಷಣ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಮತ್ತು ಅಗತ್ಯವಿರುವ ಎಲ್ಲಾ ಉಪಕರಣಗಳು ಹಾಗೂ ಆಂಬುಲೆನ್ಸಗಳನ್ನು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು’ ಎಂದರು.</p>.<p>‘ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಈಗ 23 ಜನ ಐಸೋಲೇಷನ್ನಲ್ಲಿ ಇದ್ದು, 182 ಜನ ಹೋಂ ಐಸೋಲೇಷನ್ನಲ್ಲಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲೂ ನಿಗದಿತ ಪ್ರಮಾಣದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಬೆಡ್ಗಳನ್ನು ಕಾಯ್ದಿರಿಸಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗಾಗಿ ಅಗತ್ಯ ಬೆಡ್, ಐಸಿಯು ಹಾಗೂ ವೆಂಟಿಲೇಟರ್ಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸುಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಡಿಎಚ್ಒ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಉಪಕರಣಗಳು ಸುಸ್ಥಿತಿಯಲ್ಲಿರುವ ಕುರಿತು ಎರಡು ದಿನಗಳ ಒಳಗೆ ದೃಢೀಕರಣವನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು. ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು’ ಎಂದು ಸೂಚನೆ ನೀಡಿದರು.</p>.<p>ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಕೊರೊನಾ ಟೆಸ್ಟ್ ದತ್ತಾಂಶವನ್ನು ಐಸಿಎಂಆರ್ ಪೋರ್ಟಲ್ನಲ್ಲಿ ಅಳವಡಿಸುವ ಕಾರ್ಯ ಬಾಕಿ ಉಳಿದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್,ಜಿಲ್ಲಾಸ್ಪತ್ರೆಯ ಸರ್ಜನ್ ಡಾ. ಜಯಪ್ರಕಾಶ್, ಡಿಎಚ್ಓ ಡಾ.ನಾಗರಾಜ್,ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕಿ ಕೌಸರ್ ರೇಷ್ಮಾ,ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಹಾಜರಿದ್ದರು.</p>.<p><strong>‘ಹೆಚ್ಚಿನ ಪ್ರಮಾಣದ ಚುಚ್ಚು ಮದ್ದು ನೀಡಿದರೆ ಕ್ರಮ’</strong><br />‘ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಯಂತೆಯೇ ಚುಚ್ಚುಮದ್ದನ್ನು ಬಳಸಬೇಕು. ಕಾನೂನು ಉಲ್ಲಂಘಿಸಿದರೆ ಕರ್ನಾಟಕ ವಿಪತ್ತು ನಿರ್ವಹಣೆ ಕಾಯ್ದೆಯಡಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಎಚ್ಚರಿಸಿದರು.</p>.<p>ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ಅಗತ್ಯವಿಲ್ಲದಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಕೇಳುತ್ತಿದ್ದಾರೆ ಎನ್ನುವ ವಿಷಯ ಕುರಿತು ಈ ಎಚ್ಚರಿಕೆ ನೀಡಿದರು.</p>.<p>ಕಾನೂನು ಉಲ್ಲಂಘಿಸಿದರೆ ಅಪರಾಧಕ್ಕೆ ₹50 ಸಾವಿರ ದಂಡ ಮತ್ತು 3 ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>