<p><strong>ದಾವಣಗೆರೆ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ವೈಯಕ್ತಿಕ ಮಾನಹಾನಿ ಉಂಟು ಮಾಡಿ ಪ್ರಾಣ ಬೆದರಿಕೆ ಹಾಕಿರುವ ಕುರಿತಂತೆ ಇಲ್ಲಿನ ಬಡಾವಣೆ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಶಾಸಕ ಶಾಮನೂರು ಶಿವಶಂಕರಪ್ಪ ಅವರ ಕಚೇರಿಗೆ ಪ್ರತಿನಿತ್ಯ ಬರುವ ಪತ್ರಗಳನ್ನು ಪರಿಶೀಲಿಸಿದಾಗ ಅದರಲ್ಲಿ ಒಂದು ಪತ್ರದಲ್ಲಿ ಸಿಎಂ ಹಾಗೂ ಡಿಸಿಎಂ ಅವರ ಬಗ್ಗೆ ವೈಯಕ್ತಿಕ ಮಾನಹಾನಿ ಮಾಡುವ ಕೆಟ್ಟ ಶಬ್ದಗಳ್ನು ಬಳಸಿ ಪ್ರಾಣ ಬೆದರಿಕೆಯನ್ನು ಹಾಕಲಾಗಿದೆ. </p>.<p>ಇದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದಾಗ ಅವರ ಸಲಹೆಯಂತೆ ಶಾಸಕರ ಆಪ್ತ ಸಹಾಯಕ ರವಿಕುಮಾರ್ ಬಿ.ಎನ್. ದೂರು ನೀಡಿದ್ದಾರೆ.</p>.<p>ಹಣದ ಆಮಿಷ: ₹6.15 ಲಕ್ಷ ವಂಚನೆ</p>.<p>ದಾವಣಗೆರೆ: ಟಾಸ್ಕ್ ಪೂರ್ಣಗೊಳಿಸಿದರೆ ಹೆಚ್ಚಿನ ಹಣ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಖಾಸಗಿ ಕಂಪನಿಯ ಉದ್ಯಗಿಯೊಬ್ಬರಿಗೆ ₹ 6.15 ಲಕ್ಷ ವಂಚಿಸಿದ್ದಾನೆ.</p>.<p>ಎಲ್ಬಿಎಸ್ ನಗರದ ಆರ್.ಎಂ.ಸಿ ರಸ್ತೆಯ ನಿವಾಸಿ ಶಿವಕುಮಾರ್ ಎಸ್.ಬಿ.ಹಣ ಕಳೆದುಕೊಂಡವರು.</p>.<p>ಗೂಗಲ್ ರಿವೀವ್ ರೇಟಿಂಗ್ ಏಜೆಂಟ್ ಎಂದು ಪರಿಚಯ ಮಾಡಿಕೊಂಡು ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು ಹಂತ ಹಂತವಾಗಿ ₹ 6.15 ಲಕ್ಷ ವಂಚಿಸಿದ್ದಾನೆ. ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ವೈಯಕ್ತಿಕ ಮಾನಹಾನಿ ಉಂಟು ಮಾಡಿ ಪ್ರಾಣ ಬೆದರಿಕೆ ಹಾಕಿರುವ ಕುರಿತಂತೆ ಇಲ್ಲಿನ ಬಡಾವಣೆ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಶಾಸಕ ಶಾಮನೂರು ಶಿವಶಂಕರಪ್ಪ ಅವರ ಕಚೇರಿಗೆ ಪ್ರತಿನಿತ್ಯ ಬರುವ ಪತ್ರಗಳನ್ನು ಪರಿಶೀಲಿಸಿದಾಗ ಅದರಲ್ಲಿ ಒಂದು ಪತ್ರದಲ್ಲಿ ಸಿಎಂ ಹಾಗೂ ಡಿಸಿಎಂ ಅವರ ಬಗ್ಗೆ ವೈಯಕ್ತಿಕ ಮಾನಹಾನಿ ಮಾಡುವ ಕೆಟ್ಟ ಶಬ್ದಗಳ್ನು ಬಳಸಿ ಪ್ರಾಣ ಬೆದರಿಕೆಯನ್ನು ಹಾಕಲಾಗಿದೆ. </p>.<p>ಇದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದಾಗ ಅವರ ಸಲಹೆಯಂತೆ ಶಾಸಕರ ಆಪ್ತ ಸಹಾಯಕ ರವಿಕುಮಾರ್ ಬಿ.ಎನ್. ದೂರು ನೀಡಿದ್ದಾರೆ.</p>.<p>ಹಣದ ಆಮಿಷ: ₹6.15 ಲಕ್ಷ ವಂಚನೆ</p>.<p>ದಾವಣಗೆರೆ: ಟಾಸ್ಕ್ ಪೂರ್ಣಗೊಳಿಸಿದರೆ ಹೆಚ್ಚಿನ ಹಣ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಖಾಸಗಿ ಕಂಪನಿಯ ಉದ್ಯಗಿಯೊಬ್ಬರಿಗೆ ₹ 6.15 ಲಕ್ಷ ವಂಚಿಸಿದ್ದಾನೆ.</p>.<p>ಎಲ್ಬಿಎಸ್ ನಗರದ ಆರ್.ಎಂ.ಸಿ ರಸ್ತೆಯ ನಿವಾಸಿ ಶಿವಕುಮಾರ್ ಎಸ್.ಬಿ.ಹಣ ಕಳೆದುಕೊಂಡವರು.</p>.<p>ಗೂಗಲ್ ರಿವೀವ್ ರೇಟಿಂಗ್ ಏಜೆಂಟ್ ಎಂದು ಪರಿಚಯ ಮಾಡಿಕೊಂಡು ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು ಹಂತ ಹಂತವಾಗಿ ₹ 6.15 ಲಕ್ಷ ವಂಚಿಸಿದ್ದಾನೆ. ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>