<p><strong>ದಾವಣಗೆರೆ:</strong> ಲೋಕಾಯುಕ್ತರ ಹೆಸರಿನಲ್ಲಿ ನ್ಯಾಮತಿ ತಹಶೀಲ್ದಾರ್ ಗೋವಿಂದಪ್ಪ ಅವರಿಗೆ ಕರೆ ಮಾಡಿ ಹಣ ಹಾಕುವಂತೆ ಬೆದರಿಸಿದ್ದ ಆರೋಪಿ ಮುರಿಗೆಪ್ಪ ಅಲಿಯಾಸ್ ಮುರುಗೇಶ್ ವಿರುದ್ಧ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಕುರಿತು ರಾಜ್ಯದ ವಿವಿಧ ಠಾಣೆಗಳಲ್ಲಿ 36ಕ್ಕೂ ಪ್ರಕರಣಗಳು ದಾಖಲಾಗಿವೆ.</p>.<p>ಡಿ.7ರಂದು ಗೋವಿಂದಪ್ಪ ಅವರಿಗೆ ಕರೆ ಮಾಡಿ, ‘ನಾನು ಲೋಕಾಯುಕ್ತ ಕಚೇರಿಯ ಡಿವೈಎಸ್ಪಿಯಾಗಿದ್ದು, ನಿಮ್ಮ ಮೇಲೆ ಬೆಂಗಳೂರು ನಗರದ ಎಂ.ಎಸ್. ಬಿಲ್ಡಿಂಗ್ನಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಎಫ್.ಐ.ಆರ್ ಆಗಿದೆ. ಈ ವಿಚಾರವಾಗಿ ರೇಡ್ ಮಾಡಲು ಸಿಬ್ಬಂದಿ ತಯಾರು ಮಾಡಿದ್ದಾರೆ. ನಿಮ್ಮ ಮೇಲೆ ದಾಳಿ ಮಾಡದಂತೆ ನಮ್ಮ ಮೇಲಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು ಹೇಳಿದ ನಂಬರ್ಗೆ ₹2 ಲಕ್ಷ ಹಾಕಿ ಎಂದು ಬೇಡಿಕೆ ಇಟ್ಟಿದ್ದ. ಈ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಜಾಡು ಹಿಡಿದು ಪೊಲೀಸರು ಮಹಾರಾಷ್ಟ್ರದ ಸಾಂಗ್ಲಿಯ ಮೀರಜ್ ಟೌನ್ನಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದರು. </p>.<p>ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಲೋಕಾಯುಕ್ತರ ಹೆಸರಿನಲ್ಲಿ ನ್ಯಾಮತಿ ತಹಶೀಲ್ದಾರ್ ಗೋವಿಂದಪ್ಪ ಅವರಿಗೆ ಕರೆ ಮಾಡಿ ಹಣ ಹಾಕುವಂತೆ ಬೆದರಿಸಿದ್ದ ಆರೋಪಿ ಮುರಿಗೆಪ್ಪ ಅಲಿಯಾಸ್ ಮುರುಗೇಶ್ ವಿರುದ್ಧ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಕುರಿತು ರಾಜ್ಯದ ವಿವಿಧ ಠಾಣೆಗಳಲ್ಲಿ 36ಕ್ಕೂ ಪ್ರಕರಣಗಳು ದಾಖಲಾಗಿವೆ.</p>.<p>ಡಿ.7ರಂದು ಗೋವಿಂದಪ್ಪ ಅವರಿಗೆ ಕರೆ ಮಾಡಿ, ‘ನಾನು ಲೋಕಾಯುಕ್ತ ಕಚೇರಿಯ ಡಿವೈಎಸ್ಪಿಯಾಗಿದ್ದು, ನಿಮ್ಮ ಮೇಲೆ ಬೆಂಗಳೂರು ನಗರದ ಎಂ.ಎಸ್. ಬಿಲ್ಡಿಂಗ್ನಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಎಫ್.ಐ.ಆರ್ ಆಗಿದೆ. ಈ ವಿಚಾರವಾಗಿ ರೇಡ್ ಮಾಡಲು ಸಿಬ್ಬಂದಿ ತಯಾರು ಮಾಡಿದ್ದಾರೆ. ನಿಮ್ಮ ಮೇಲೆ ದಾಳಿ ಮಾಡದಂತೆ ನಮ್ಮ ಮೇಲಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು ಹೇಳಿದ ನಂಬರ್ಗೆ ₹2 ಲಕ್ಷ ಹಾಕಿ ಎಂದು ಬೇಡಿಕೆ ಇಟ್ಟಿದ್ದ. ಈ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಜಾಡು ಹಿಡಿದು ಪೊಲೀಸರು ಮಹಾರಾಷ್ಟ್ರದ ಸಾಂಗ್ಲಿಯ ಮೀರಜ್ ಟೌನ್ನಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದರು. </p>.<p>ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>