ಡಿ.7ರಂದು ಗೋವಿಂದಪ್ಪ ಅವರಿಗೆ ಕರೆ ಮಾಡಿ, ‘ನಾನು ಲೋಕಾಯುಕ್ತ ಕಚೇರಿಯ ಡಿವೈಎಸ್ಪಿಯಾಗಿದ್ದು, ನಿಮ್ಮ ಮೇಲೆ ಬೆಂಗಳೂರು ನಗರದ ಎಂ.ಎಸ್. ಬಿಲ್ಡಿಂಗ್ನಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಎಫ್.ಐ.ಆರ್ ಆಗಿದೆ. ಈ ವಿಚಾರವಾಗಿ ರೇಡ್ ಮಾಡಲು ಸಿಬ್ಬಂದಿ ತಯಾರು ಮಾಡಿದ್ದಾರೆ. ನಿಮ್ಮ ಮೇಲೆ ದಾಳಿ ಮಾಡದಂತೆ ನಮ್ಮ ಮೇಲಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು ಹೇಳಿದ ನಂಬರ್ಗೆ ₹2 ಲಕ್ಷ ಹಾಕಿ ಎಂದು ಬೇಡಿಕೆ ಇಟ್ಟಿದ್ದ. ಈ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಜಾಡು ಹಿಡಿದು ಪೊಲೀಸರು ಮಹಾರಾಷ್ಟ್ರದ ಸಾಂಗ್ಲಿಯ ಮೀರಜ್ ಟೌನ್ನಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದರು.