ಹೊಸಪೇಟೆ ಕಡೆಯಿಂದ ಚಿತ್ರದುರ್ಗದ ಕಡೆಗೆ ಬರುತ್ತಿದ್ದ ಜಾರ್ಖಂಡ್ ರಾಜ್ಯದ ನೋಂದಣಿ ಸಂಖ್ಯೆ ಹೊಂದಿರುವ, ಕೆಮಿಕಲ್ ಸಾಗಿಸುವ ಟ್ಯಾಂಕರ್ ಮತ್ತು ಟೈರ್ ತುಂಬಿಸಿಕೊಂಡು ಚಿತ್ರದುರ್ಗ ಕಡೆಯಿಂದ ಹೋಗುತ್ತಿದ್ದ ಹರಿಯಾಣ ನೋಂದಣಿ ಸಂಖ್ಯೆ ಹೊಂದಿರುವ ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯಾದ ರಭಸಕ್ಕೆ ತಕ್ಷಣ ಬೆಂಕಿ ಹತ್ತಿ ಉರಿಯತೊಡಗಿದೆ. ರಾತ್ರಿ 8ಕ್ಕೆ ಅಪಘಾತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಎರಡು ಗಂಟೆ ಪ್ರಯತ್ನಿಸಿ ಬೆಂಕಿ ನಂದಿಸಿದರು. ಟ್ಯಾಂಕರ್ನಲ್ಲಿ ಕರಕಲಾದ ಎರಡು ಮೃತದೇಹಗಳು ಮತ್ತೆಯಾಗಿವೆ. ಟೈರ್ ಸಾಗಿಸುವ ಲಾರಿಯಲ್ಲಿ ಸುಟ್ಟು ಕರಕಲಾದ ಒಂದು ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಬಸವಪ್ರಭು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.