ಮದ್ದೂರು: ಪಟ್ಟಣದ ಎಚ್.ಕೆ.ವೀರಣ್ಣಗೌಡ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಒಬ್ಬ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದು, ಈ ಪರೀಕ್ಷಾ ಕಾರ್ಯದಲ್ಲಿ 21 ಮಂದಿ ಕರ್ತವ್ಯ ನಿರ್ವಹಿಸಿದರು.
ಪಟ್ಟಣದ ನಿವಾಸಿ ಸಮೀರಾ ಬೇಗಂ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯು ಭೂಗೋಳಶಾಸ್ತ್ರ ವಿಷಯವನ್ನು ಖಾಸಗಿಯಾಗಿ ಒಬ್ಬರೇ ತೆಗೆದುಕೊಂಡಿದ್ದರು. ಹಾಗಾಗಿ, ಅವರೊಬ್ಬರಿಗೇ ಪ್ರತ್ಯೇಕ ಪರೀಕ್ಷಾ ವ್ಯವಸ್ಥೆ ಕಲ್ಪಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.