ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಸೋದೆ ಮಠದ ದೈವಜ್ಞ ಬ್ರಾಹ್ಮಣ ಶಿಷ್ಯವೃಂದವು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಮಂಗಳವಾರ ಬೆಳಿಗ್ಗೆ ಪಟ್ಟದೇವರ ಪೂಜೆ, ಸಾಮೂಹಿಕ ಪಾದಪೂಜೆ ನಂತರ ತುಲಾಭಾರ ಏರ್ಪಡಿಸಲಾಗಿತ್ತು. ಭಕ್ತರು ಅಕ್ಕಿ, ಬೆಲ್ಲ, ಹಣ್ಣುಗಳೊಂದಿಗೆ ಶ್ರೀಗಳ ತುಲಾಭಾರ ನೆರವೇರಿಸಿ ಸಂಭ್ರಮಿಸುವ ಉತ್ಸಾಹದಲ್ಲಿದ್ದರು. ಈ ಸಂದರ್ಭದಲ್ಲಿ ತಕ್ಕಡಿ ಕೊಂಡಿ ಕಳಚಿದ್ದರಿಂದ ಸ್ವಾಮೀಜಿಯ ತಲೆಗೆ ಏಟು ಬಿತ್ತು. ಇದರಿಂದ ಕೆಲ ಕಾಲ ಭಕ್ತರಲ್ಲಿ ಆತಂಕ ಮೂಡಿತು.