<p><strong>ಹರಿಹರ</strong>:ನಗರದ ಎಪಿಎಂಸಿ ಮಾರುಕಟ್ಟೆ ಆವರಣದ ಗೋದಾಮಿನ ಬಳಿ ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ಕಿಟ್ಗಳನ್ನು ಪಡೆಯಲು ಬುಧವಾರ ಸಾವಿರಾರು ಕಾರ್ಮಿಕರು ಏಕಾಏಕಿ ನುಗ್ಗಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ. ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.</p>.<p>ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ದಿನಸಿ ಕಿಟ್ ಹಂಚುತ್ತಿರುವ ಮಾಹಿತಿ ತಿಳಿದ ಕೂಡಲೇ ನಗರ ಹಾಗೂ ಗ್ರಾಮಾಂತರ ಪ್ರದೇಶದಿಂದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಹಂಚಿಕೆಗೆ ಕಾರ್ಮಿಕ ಇಲಾಖೆಯಿಂದ ಯಾವುದೇ ವ್ಯವಸ್ಥೆ ಕಲ್ಪಿಸದ ಕಾರಣ ಗೊಂದಲ ಸೃಷ್ಟಿಯಾಯಿತು.</p>.<p>ನೂರಾರು ಜನರು ಏಕಾಏಕಿ ನುಗ್ಗಿದರು. ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ನೂಕುನುಗ್ಗಲಿನಲ್ಲಿ ಇಬ್ಬರು ಕಾರ್ಮಿಕರು ಚರಂಡಿಯಲ್ಲಿ ಬಿದ್ದು ಗಾಯಗೊಂಡರು. ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕಾರ್ಮಿಕ ಇಲಾಖೆ ಅಧಿಕಾರಿ ಕವಿತಾ, ‘ತಾಲ್ಲೂಕಿನಲ್ಲಿ ಒಟ್ಟು 17,895 ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು, 5 ಸಾವಿರ ಕಿಟ್ಗಳು ಮಂಜೂರಾಗಿವೆ. ಶಾಸಕರು ಹೆಚ್ಚುವರಿ ಕಿಟ್ಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ. ಕಿಟ್ಗಳು ಬಂದ ನಂತರ ವಿತರಿಸಲಾಗುವುದು’ ಎಂದರು.</p>.<p>ಕಟ್ಟಡ ಕಾರ್ಮಿಕ ಬಸವರಾಜ್, ‘ಇಲಾಖೆ ಸಂಘ-ಸಂಸ್ಥೆಗಳಿಗೆ ಕಿಟ್ ವಿತರಿಸುವ ಜವಾಬ್ದಾರಿ ನೀಡಿರುವ ಕಾರಣ ಸಮಸ್ಯೆಯಾಗಿದೆ’ ಎಂದರು.</p>.<p>ಇಲಾಖೆಯ ಬೇಜವಾಬ್ದಾರಿಯಿಂದ ಕಾರ್ಮಿಕರು ಗಾಯಗೊಂಡಿದ್ದಾರೆ. ಇನ್ನಾದರೂ ಮಾಹಿತಿ ನೀಡುವ ಜತೆಗೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>:ನಗರದ ಎಪಿಎಂಸಿ ಮಾರುಕಟ್ಟೆ ಆವರಣದ ಗೋದಾಮಿನ ಬಳಿ ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ ನೀಡುತ್ತಿರುವ ಕಿಟ್ಗಳನ್ನು ಪಡೆಯಲು ಬುಧವಾರ ಸಾವಿರಾರು ಕಾರ್ಮಿಕರು ಏಕಾಏಕಿ ನುಗ್ಗಿದ್ದು, ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ. ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.</p>.<p>ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ದಿನಸಿ ಕಿಟ್ ಹಂಚುತ್ತಿರುವ ಮಾಹಿತಿ ತಿಳಿದ ಕೂಡಲೇ ನಗರ ಹಾಗೂ ಗ್ರಾಮಾಂತರ ಪ್ರದೇಶದಿಂದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಹಂಚಿಕೆಗೆ ಕಾರ್ಮಿಕ ಇಲಾಖೆಯಿಂದ ಯಾವುದೇ ವ್ಯವಸ್ಥೆ ಕಲ್ಪಿಸದ ಕಾರಣ ಗೊಂದಲ ಸೃಷ್ಟಿಯಾಯಿತು.</p>.<p>ನೂರಾರು ಜನರು ಏಕಾಏಕಿ ನುಗ್ಗಿದರು. ಪೊಲೀಸರು ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ನೂಕುನುಗ್ಗಲಿನಲ್ಲಿ ಇಬ್ಬರು ಕಾರ್ಮಿಕರು ಚರಂಡಿಯಲ್ಲಿ ಬಿದ್ದು ಗಾಯಗೊಂಡರು. ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಕಾರ್ಮಿಕ ಇಲಾಖೆ ಅಧಿಕಾರಿ ಕವಿತಾ, ‘ತಾಲ್ಲೂಕಿನಲ್ಲಿ ಒಟ್ಟು 17,895 ನೋಂದಾಯಿತ ಕಟ್ಟಡ ಕಾರ್ಮಿಕರಿದ್ದು, 5 ಸಾವಿರ ಕಿಟ್ಗಳು ಮಂಜೂರಾಗಿವೆ. ಶಾಸಕರು ಹೆಚ್ಚುವರಿ ಕಿಟ್ಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ. ಕಿಟ್ಗಳು ಬಂದ ನಂತರ ವಿತರಿಸಲಾಗುವುದು’ ಎಂದರು.</p>.<p>ಕಟ್ಟಡ ಕಾರ್ಮಿಕ ಬಸವರಾಜ್, ‘ಇಲಾಖೆ ಸಂಘ-ಸಂಸ್ಥೆಗಳಿಗೆ ಕಿಟ್ ವಿತರಿಸುವ ಜವಾಬ್ದಾರಿ ನೀಡಿರುವ ಕಾರಣ ಸಮಸ್ಯೆಯಾಗಿದೆ’ ಎಂದರು.</p>.<p>ಇಲಾಖೆಯ ಬೇಜವಾಬ್ದಾರಿಯಿಂದ ಕಾರ್ಮಿಕರು ಗಾಯಗೊಂಡಿದ್ದಾರೆ. ಇನ್ನಾದರೂ ಮಾಹಿತಿ ನೀಡುವ ಜತೆಗೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಕಾರ್ಮಿಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>