‘ಕೌಟುಂಬಿಕ ಕಲಹದಿಂದಾಗಿ ಪತಿಯಿಂದ ದೂರವಾಗಿರುವ ನಾನು, ಪುತ್ರ ಹಾಗೂ ತಾಯಿ ಜತೆ ವಾಸವಿದ್ದೇನೆ. ತಾಯಿಗೆ ಪರಿಚಿತರಾಗಿದ್ದ ಮಾಯಣ್ಣ, ತಮ್ಮ ಕಚೇರಿಯಲ್ಲಿ ಸಹಾಯಕಿ ಕೆಲಸಕ್ಕೆ ನೇಮಿಸಿಕೊಂಡಿದ್ದರು. ತಿಂಗಳಿಗೆ ₹3 ಸಾವಿರ ವೇತನ ನೀಡುತ್ತಿದ್ದರು. ತಮ್ಮ ಪತ್ನಿಯ ಆರೋಗ್ಯ ಸರಿ ಇಲ್ಲ. ಹೆಚ್ಚು ದಿನ ಬದುಕುವುದಿಲ್ಲ. ತನಗೆ ಗಂಡು ಮಗು ಅಗತ್ಯವಿದ್ದು, ಮದುವೆಯಾಗುವಂತೆ ಕೇಳಿಕೊಂಡಿದ್ದರು’ ಎಂದು ದೂರಿನಲ್ಲಿ ಮಹಿಳೆ ಬರೆದಿದ್ದಾರೆ.